ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ

ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2013 – 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ  ಎಂದು ತಿಳಿಸಿದರು.

ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದರು.

ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago