ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ

ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2013 – 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ  ಎಂದು ತಿಳಿಸಿದರು.

ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದರು.

ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago