ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ

ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2013 – 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ  ಎಂದು ತಿಳಿಸಿದರು.

ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದರು.

ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

13 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

15 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

21 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

22 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago