ಸಾಮಾಜಿಕ ಜಾಲತಾಣದಲ್ಲಿ ಬಸವ ಮೂರ್ತಿ ಮಾದರ ಚೆನ್ನಯ್ಯ ಬಗ್ಗೆ ಅವಹೇಳನ ಆರೋಪ: ಬಸವ ಮೂರ್ತಿ ಮಾದರ ಚೆನ್ನಯ್ಯ ಸೇವಾ ಸಮಿತಿ ಖಂಡನೆ

ಡಿ.3ರಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಬಸವ ಮೂರ್ತಿ ಮಾದರ ಚೆನ್ನಯ್ಯ ಬಗ್ಗೆ ಅವಹೇಳನ ಮಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸಮಾಜದಲ್ಲಿ ಕೆಳಮಟ್ಟದಲ್ಲಿರುವಂತಹ ಸಮುದಾಯವನ್ನು ಶಿಕ್ಷಣ, ಉದ್ಯೋಗ, ಮೀಸಲಾತಿ ಸೇರಿದಂತೆ ಎಲ್ಲಾ ರಂಗಗಳಲ್ಲಿ ಮೇಲ್ಮಟ್ಟಕ್ಕೆ ಕೊಂಡೊಯ್ಯಲು ಸ್ವಾಮೀಜಿ ಬಹಳ ಶ್ರಮ ವಹಿಸಿದ್ದಾರೆ. ಅಂತವರ ಬಗ್ಗೆ ಅವಹೇಳನ ಮಾಡುವುದು ಅಕ್ಷರಶಃ ಅಪರಾಧ, ಅವಹೇಳ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಸವ ಮೂರ್ತಿ ಮಾದರ ಚೆನ್ನಯ್ಯ ಸೇವಾ ಸಮಿತಿ ರಾಜ್ಯ ಉಪಾಧ್ಯಕ್ಷ ನರಸಿಂಹ ಮೂರ್ತಿ ಒತ್ತಾಯಿಸಿದರು.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ಎಂಬ ಈ‌ ಮೂವರು ಸ್ವಾಮೀಜಿ ಕುರಿತು ಏನೂ ತಿಳಿಯದೇ ಎಲ್ಲೋ ಕುಳಿತು ಕಾಫಿ, ಟೀ ಕುಡಿಯುತ್ತಾ ವಿರೋಧ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಚರ್ಚೆ ಮಾಡುವುದಾದರೆ ಮಠಕ್ಕೆ ಬಂದು ನೇರಾನೇರ ಮಾತಾಡಿ, ಅದನ್ನ ಬಿಟ್ಟು ಸ್ವಾಮೀಜಿ ಸಾಧನೆ ಬಗ್ಗೆ ತಿಳಿಯದೇ ಮಾತಾಡಿದರೆ ಸಮುದಾಯಕ್ಕೆ ಧಕ್ಕೆ ಬರುತ್ತದೆ ಎಂದು ಹೇಳಿದರು.

ಸ್ವಾಮೀಜಿ ನಮ್ಮ ಪ್ರತಿನಿಧಿ ಅಲ್ಲ ಅನ್ನೋದು ಮುರ್ಖತನ. ಸ್ವಾಮೀಜಿ ನಮ್ಮ ಎಂದೆಂದಿಗೂ ನಮ್ಮ ಪ್ರತಿನಿಧಿ, ನಮ್ಮ ಸಮುದಾಯದವರು, ನಮ್ಮ ಗುರುಗಳು ಎಂದರು.

ಅದೇರೀತಿ ಇತ್ತೀಚೆಗೆ ಸ್ವಾಮೀಜಿಗೆ ಕೊಲೆ ಬೆದರಿಕೆ ಇರುವುದರಿಂದ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಮಾದರ ಚೆನ್ನಯ್ಯ ಸೇವಾ ಸಮಿತಿ ಕಾರ್ಯಾಧ್ಯಕ್ಷ ಹನುಮಂತರಾಜು ಮಾತನಾಡಿ, ಸ್ವಾಮೀಜಿ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವುದು ನೋಡಿ ಕೆಲವರು ಸಹಿಸದೇ ಅವಹೇಳನ ಮಾಡುತ್ತಿದ್ದಾರೆ.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ಅವರು ಸ್ವಾಮೀಜಿ ಕುರಿತು ಸಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುತ್ತಿದ್ದಾರೆ. ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ನಮ್ಮ ಸಮುದಾಯದಲ್ಲಿ ಏನೇನೂ ಅಲ್ಲ. ಕೇವಲ ಕಾರ್ಯಗಳಲ್ಲಿ ಭಾಷಣ ಮಾಡೋದಕ್ಕೆ ಮಾತ್ರ ಹೋಗುತ್ತಾರೆ ಅಷ್ಟೇ, ಸಮಾಜದ ಆಗು-ಹೋಗುಗಳು, ಕಷ್ಟ ಸುಖ, ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ಈ ಕೆಲಸವನ್ನು ಸ್ವಾಮೀಜಿ ಕಳೆದ ಇಪ್ಪತ್ಮೂರು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಅಂತವರ ಬಗ್ಗೆ ಈ‌ ಮೂರು ಜನ ಮಾತನಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

ಹುಬ್ಬಳ್ಳಿಯಲ್ಲಿ ನೂರು ಎಕರೆ ಜಮೀನನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಂಡು ಸಮುದಾಯದ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಶಾಲಾ-ಕಾಲೇಜು ಕಟ್ಟಲು ಮುಂದಾಗಿದ್ದಾರೆ. ಸ್ವಾಮೀಜಿಯ ಇಂತಹ ಸಾಧನೆಗಳನ್ನು ಸಹಿಸದ ಇವರು ತೊಡಕುಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸ್ವಾಮೀಜಿ ಬಗ್ಗೆ ಅವಹೇಳನ ಮಾಡಿದ ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ವಿರುದ್ಧ ದೂರು ದಾಖಲು‌ ಮಾಡಲಾಗುವುದು.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ನವರೇ ಸ್ವಾಮೀಜಿಗಳು ಆಗಬೇಂದು ಆಸೆ ಇದ್ದರೆ ನಮ್ಮ ಸ್ವಾಮೀಜಿಯಿಂದಲೇ ದೀಕ್ಷೆ ತೆಗೆದುಕೊಂಡು ಆಗಿ, ದೀಕ್ಷೆ ತೆಗೆದುಕೊಂಡು ಸಮಾಜಕ್ಕೆ ಒಳ್ಳೆ ಕೆಲಸ ಮಾಡಿ, ಆಗ ನಾವೆಲ್ಲ ನಿಮ್ಮನ್ನು ಸ್ವಾಮೀಜಿಗಳಾಗಿ ಸ್ವೀಕರಿಸುತ್ತೇವೆ. ನಮಗೇಕೋ ನೀವು ನಮ್ಮ ಸಮಾಜದವರೋ ಅಥವಾ ಅಲ್ಲವೋ ಎಂಬ ಅನುಮಾನವಿದೆ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ, ಏನೇ ಸಮಸ್ಯೆ ಇದ್ದಲ್ಲಿ ಮಠದಲ್ಲಿ ಕೂತು ಬಗೆಹರಿಸಿಕೊಳ್ಳೋಣ ಎಂದು ಹೇಳಿದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

9 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

12 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

14 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

16 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

21 hours ago