ಸಾಮಾಜಿಕ ಜಾಲತಾಣದಲ್ಲಿ ಬಸವ ಮೂರ್ತಿ ಮಾದರ ಚೆನ್ನಯ್ಯ ಬಗ್ಗೆ ಅವಹೇಳನ ಆರೋಪ: ಬಸವ ಮೂರ್ತಿ ಮಾದರ ಚೆನ್ನಯ್ಯ ಸೇವಾ ಸಮಿತಿ ಖಂಡನೆ

ಡಿ.3ರಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಬಸವ ಮೂರ್ತಿ ಮಾದರ ಚೆನ್ನಯ್ಯ ಬಗ್ಗೆ ಅವಹೇಳನ ಮಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸಮಾಜದಲ್ಲಿ ಕೆಳಮಟ್ಟದಲ್ಲಿರುವಂತಹ ಸಮುದಾಯವನ್ನು ಶಿಕ್ಷಣ, ಉದ್ಯೋಗ, ಮೀಸಲಾತಿ ಸೇರಿದಂತೆ ಎಲ್ಲಾ ರಂಗಗಳಲ್ಲಿ ಮೇಲ್ಮಟ್ಟಕ್ಕೆ ಕೊಂಡೊಯ್ಯಲು ಸ್ವಾಮೀಜಿ ಬಹಳ ಶ್ರಮ ವಹಿಸಿದ್ದಾರೆ. ಅಂತವರ ಬಗ್ಗೆ ಅವಹೇಳನ ಮಾಡುವುದು ಅಕ್ಷರಶಃ ಅಪರಾಧ, ಅವಹೇಳ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಸವ ಮೂರ್ತಿ ಮಾದರ ಚೆನ್ನಯ್ಯ ಸೇವಾ ಸಮಿತಿ ರಾಜ್ಯ ಉಪಾಧ್ಯಕ್ಷ ನರಸಿಂಹ ಮೂರ್ತಿ ಒತ್ತಾಯಿಸಿದರು.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ಎಂಬ ಈ‌ ಮೂವರು ಸ್ವಾಮೀಜಿ ಕುರಿತು ಏನೂ ತಿಳಿಯದೇ ಎಲ್ಲೋ ಕುಳಿತು ಕಾಫಿ, ಟೀ ಕುಡಿಯುತ್ತಾ ವಿರೋಧ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಚರ್ಚೆ ಮಾಡುವುದಾದರೆ ಮಠಕ್ಕೆ ಬಂದು ನೇರಾನೇರ ಮಾತಾಡಿ, ಅದನ್ನ ಬಿಟ್ಟು ಸ್ವಾಮೀಜಿ ಸಾಧನೆ ಬಗ್ಗೆ ತಿಳಿಯದೇ ಮಾತಾಡಿದರೆ ಸಮುದಾಯಕ್ಕೆ ಧಕ್ಕೆ ಬರುತ್ತದೆ ಎಂದು ಹೇಳಿದರು.

ಸ್ವಾಮೀಜಿ ನಮ್ಮ ಪ್ರತಿನಿಧಿ ಅಲ್ಲ ಅನ್ನೋದು ಮುರ್ಖತನ. ಸ್ವಾಮೀಜಿ ನಮ್ಮ ಎಂದೆಂದಿಗೂ ನಮ್ಮ ಪ್ರತಿನಿಧಿ, ನಮ್ಮ ಸಮುದಾಯದವರು, ನಮ್ಮ ಗುರುಗಳು ಎಂದರು.

ಅದೇರೀತಿ ಇತ್ತೀಚೆಗೆ ಸ್ವಾಮೀಜಿಗೆ ಕೊಲೆ ಬೆದರಿಕೆ ಇರುವುದರಿಂದ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಮಾದರ ಚೆನ್ನಯ್ಯ ಸೇವಾ ಸಮಿತಿ ಕಾರ್ಯಾಧ್ಯಕ್ಷ ಹನುಮಂತರಾಜು ಮಾತನಾಡಿ, ಸ್ವಾಮೀಜಿ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವುದು ನೋಡಿ ಕೆಲವರು ಸಹಿಸದೇ ಅವಹೇಳನ ಮಾಡುತ್ತಿದ್ದಾರೆ.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ಅವರು ಸ್ವಾಮೀಜಿ ಕುರಿತು ಸಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುತ್ತಿದ್ದಾರೆ. ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ನಮ್ಮ ಸಮುದಾಯದಲ್ಲಿ ಏನೇನೂ ಅಲ್ಲ. ಕೇವಲ ಕಾರ್ಯಗಳಲ್ಲಿ ಭಾಷಣ ಮಾಡೋದಕ್ಕೆ ಮಾತ್ರ ಹೋಗುತ್ತಾರೆ ಅಷ್ಟೇ, ಸಮಾಜದ ಆಗು-ಹೋಗುಗಳು, ಕಷ್ಟ ಸುಖ, ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ಈ ಕೆಲಸವನ್ನು ಸ್ವಾಮೀಜಿ ಕಳೆದ ಇಪ್ಪತ್ಮೂರು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಅಂತವರ ಬಗ್ಗೆ ಈ‌ ಮೂರು ಜನ ಮಾತನಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

ಹುಬ್ಬಳ್ಳಿಯಲ್ಲಿ ನೂರು ಎಕರೆ ಜಮೀನನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಂಡು ಸಮುದಾಯದ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಶಾಲಾ-ಕಾಲೇಜು ಕಟ್ಟಲು ಮುಂದಾಗಿದ್ದಾರೆ. ಸ್ವಾಮೀಜಿಯ ಇಂತಹ ಸಾಧನೆಗಳನ್ನು ಸಹಿಸದ ಇವರು ತೊಡಕುಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸ್ವಾಮೀಜಿ ಬಗ್ಗೆ ಅವಹೇಳನ ಮಾಡಿದ ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ವಿರುದ್ಧ ದೂರು ದಾಖಲು‌ ಮಾಡಲಾಗುವುದು.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ನವರೇ ಸ್ವಾಮೀಜಿಗಳು ಆಗಬೇಂದು ಆಸೆ ಇದ್ದರೆ ನಮ್ಮ ಸ್ವಾಮೀಜಿಯಿಂದಲೇ ದೀಕ್ಷೆ ತೆಗೆದುಕೊಂಡು ಆಗಿ, ದೀಕ್ಷೆ ತೆಗೆದುಕೊಂಡು ಸಮಾಜಕ್ಕೆ ಒಳ್ಳೆ ಕೆಲಸ ಮಾಡಿ, ಆಗ ನಾವೆಲ್ಲ ನಿಮ್ಮನ್ನು ಸ್ವಾಮೀಜಿಗಳಾಗಿ ಸ್ವೀಕರಿಸುತ್ತೇವೆ. ನಮಗೇಕೋ ನೀವು ನಮ್ಮ ಸಮಾಜದವರೋ ಅಥವಾ ಅಲ್ಲವೋ ಎಂಬ ಅನುಮಾನವಿದೆ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ, ಏನೇ ಸಮಸ್ಯೆ ಇದ್ದಲ್ಲಿ ಮಠದಲ್ಲಿ ಕೂತು ಬಗೆಹರಿಸಿಕೊಳ್ಳೋಣ ಎಂದು ಹೇಳಿದರು.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

38 minutes ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

2 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

17 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

18 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago