ಸಾಮಾಜಿಕ ಜಾಲತಾಣದಲ್ಲಿ ಬಸವ ಮೂರ್ತಿ ಮಾದರ ಚೆನ್ನಯ್ಯ ಬಗ್ಗೆ ಅವಹೇಳನ ಆರೋಪ: ಬಸವ ಮೂರ್ತಿ ಮಾದರ ಚೆನ್ನಯ್ಯ ಸೇವಾ ಸಮಿತಿ ಖಂಡನೆ

ಡಿ.3ರಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಬಸವ ಮೂರ್ತಿ ಮಾದರ ಚೆನ್ನಯ್ಯ ಬಗ್ಗೆ ಅವಹೇಳನ ಮಾಡಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸಮಾಜದಲ್ಲಿ ಕೆಳಮಟ್ಟದಲ್ಲಿರುವಂತಹ ಸಮುದಾಯವನ್ನು ಶಿಕ್ಷಣ, ಉದ್ಯೋಗ, ಮೀಸಲಾತಿ ಸೇರಿದಂತೆ ಎಲ್ಲಾ ರಂಗಗಳಲ್ಲಿ ಮೇಲ್ಮಟ್ಟಕ್ಕೆ ಕೊಂಡೊಯ್ಯಲು ಸ್ವಾಮೀಜಿ ಬಹಳ ಶ್ರಮ ವಹಿಸಿದ್ದಾರೆ. ಅಂತವರ ಬಗ್ಗೆ ಅವಹೇಳನ ಮಾಡುವುದು ಅಕ್ಷರಶಃ ಅಪರಾಧ, ಅವಹೇಳ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಸವ ಮೂರ್ತಿ ಮಾದರ ಚೆನ್ನಯ್ಯ ಸೇವಾ ಸಮಿತಿ ರಾಜ್ಯ ಉಪಾಧ್ಯಕ್ಷ ನರಸಿಂಹ ಮೂರ್ತಿ ಒತ್ತಾಯಿಸಿದರು.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ಎಂಬ ಈ‌ ಮೂವರು ಸ್ವಾಮೀಜಿ ಕುರಿತು ಏನೂ ತಿಳಿಯದೇ ಎಲ್ಲೋ ಕುಳಿತು ಕಾಫಿ, ಟೀ ಕುಡಿಯುತ್ತಾ ವಿರೋಧ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಚರ್ಚೆ ಮಾಡುವುದಾದರೆ ಮಠಕ್ಕೆ ಬಂದು ನೇರಾನೇರ ಮಾತಾಡಿ, ಅದನ್ನ ಬಿಟ್ಟು ಸ್ವಾಮೀಜಿ ಸಾಧನೆ ಬಗ್ಗೆ ತಿಳಿಯದೇ ಮಾತಾಡಿದರೆ ಸಮುದಾಯಕ್ಕೆ ಧಕ್ಕೆ ಬರುತ್ತದೆ ಎಂದು ಹೇಳಿದರು.

ಸ್ವಾಮೀಜಿ ನಮ್ಮ ಪ್ರತಿನಿಧಿ ಅಲ್ಲ ಅನ್ನೋದು ಮುರ್ಖತನ. ಸ್ವಾಮೀಜಿ ನಮ್ಮ ಎಂದೆಂದಿಗೂ ನಮ್ಮ ಪ್ರತಿನಿಧಿ, ನಮ್ಮ ಸಮುದಾಯದವರು, ನಮ್ಮ ಗುರುಗಳು ಎಂದರು.

ಅದೇರೀತಿ ಇತ್ತೀಚೆಗೆ ಸ್ವಾಮೀಜಿಗೆ ಕೊಲೆ ಬೆದರಿಕೆ ಇರುವುದರಿಂದ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಮಾದರ ಚೆನ್ನಯ್ಯ ಸೇವಾ ಸಮಿತಿ ಕಾರ್ಯಾಧ್ಯಕ್ಷ ಹನುಮಂತರಾಜು ಮಾತನಾಡಿ, ಸ್ವಾಮೀಜಿ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವುದು ನೋಡಿ ಕೆಲವರು ಸಹಿಸದೇ ಅವಹೇಳನ ಮಾಡುತ್ತಿದ್ದಾರೆ.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ಅವರು ಸ್ವಾಮೀಜಿ ಕುರಿತು ಸಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುತ್ತಿದ್ದಾರೆ. ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ನಮ್ಮ ಸಮುದಾಯದಲ್ಲಿ ಏನೇನೂ ಅಲ್ಲ. ಕೇವಲ ಕಾರ್ಯಗಳಲ್ಲಿ ಭಾಷಣ ಮಾಡೋದಕ್ಕೆ ಮಾತ್ರ ಹೋಗುತ್ತಾರೆ ಅಷ್ಟೇ, ಸಮಾಜದ ಆಗು-ಹೋಗುಗಳು, ಕಷ್ಟ ಸುಖ, ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ಈ ಕೆಲಸವನ್ನು ಸ್ವಾಮೀಜಿ ಕಳೆದ ಇಪ್ಪತ್ಮೂರು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಅಂತವರ ಬಗ್ಗೆ ಈ‌ ಮೂರು ಜನ ಮಾತನಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

ಹುಬ್ಬಳ್ಳಿಯಲ್ಲಿ ನೂರು ಎಕರೆ ಜಮೀನನ್ನು ಸರ್ಕಾರದಿಂದ ಮಂಜೂರು ಮಾಡಿಸಿಕೊಂಡು ಸಮುದಾಯದ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಶಾಲಾ-ಕಾಲೇಜು ಕಟ್ಟಲು ಮುಂದಾಗಿದ್ದಾರೆ. ಸ್ವಾಮೀಜಿಯ ಇಂತಹ ಸಾಧನೆಗಳನ್ನು ಸಹಿಸದ ಇವರು ತೊಡಕುಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸ್ವಾಮೀಜಿ ಬಗ್ಗೆ ಅವಹೇಳನ ಮಾಡಿದ ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ವಿರುದ್ಧ ದೂರು ದಾಖಲು‌ ಮಾಡಲಾಗುವುದು.

ವಡ್ಡಗೆರೆ ಡಾ.ನಾಗರಾಜಯ್ಯ, ಬೆಲ್ಲಹಳ್ಳಿ ಯತಿರಾಜ್, ಸಿ.ಕೆ.ಮಹೇಶ್ ನವರೇ ಸ್ವಾಮೀಜಿಗಳು ಆಗಬೇಂದು ಆಸೆ ಇದ್ದರೆ ನಮ್ಮ ಸ್ವಾಮೀಜಿಯಿಂದಲೇ ದೀಕ್ಷೆ ತೆಗೆದುಕೊಂಡು ಆಗಿ, ದೀಕ್ಷೆ ತೆಗೆದುಕೊಂಡು ಸಮಾಜಕ್ಕೆ ಒಳ್ಳೆ ಕೆಲಸ ಮಾಡಿ, ಆಗ ನಾವೆಲ್ಲ ನಿಮ್ಮನ್ನು ಸ್ವಾಮೀಜಿಗಳಾಗಿ ಸ್ವೀಕರಿಸುತ್ತೇವೆ. ನಮಗೇಕೋ ನೀವು ನಮ್ಮ ಸಮಾಜದವರೋ ಅಥವಾ ಅಲ್ಲವೋ ಎಂಬ ಅನುಮಾನವಿದೆ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ, ಏನೇ ಸಮಸ್ಯೆ ಇದ್ದಲ್ಲಿ ಮಠದಲ್ಲಿ ಕೂತು ಬಗೆಹರಿಸಿಕೊಳ್ಳೋಣ ಎಂದು ಹೇಳಿದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

9 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

11 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

11 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

11 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

13 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

16 hours ago