Categories: ಕೋಲಾರ

ಸಾಮಾಜಿಕ ನ್ಯಾಯದ ಅಡಿಯಲ್ಲಿ ಕುಡಾಗೆ ನೂತನವಾಗಿ ಸದಸ್ಯರ ನೇಮಕ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆಯುತ್ತಿದ್ದು ಎಲ್ಲಾ ಜಾತಿ ವರ್ಗಗಳಿಗೆ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಹ ಸಾಮಾಜಿಕ ನ್ಯಾಯದ ಅಡಿಯಲ್ಲಿ ನೂತನವಾಗಿ ಸದಸ್ಯರನ್ನು ನೇಮಕ ಮಾಡುವ ಮೂಲಕ ತಾನೊಂದು ಮಾದರಿಯ ಸರ್ಕಾರವಾಗಿದೆ ಎಂಬುದನ್ನು ನಿರೂಪಿಸಿದ್ದಾರೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯ ಕೋಟೆ ಬಿ.ಟಿ ಚಂದ್ರಶೇಖರ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿದವರಿಗೆ ಅವಕಾಶಗಳು ತಾನಾಗಿಯೇ ಸಿಗುತ್ತವೆ ಎಂಬುದಕ್ಕೆ ಇವತ್ತಿನ ನೇಮಕವೇ ಉದಾಹರಣೆಯಾಗಿವೆ ನೂತನವಾಗಿ ಸದಸ್ಯರಾಗಿ ನೇಮಕ ಮಾಡಲು ಸಹಕರಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಆಯ್ಕೆಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಇದೇ ಸಂದರ್ಭದಲ್ಲಿ ಧನ್ಯವಾದಗಳು ತಿಳಿಸಿದರು.

ಮತ್ತೊಬ್ಬ ಸದಸ್ಯ ಗಾಂಧಿನಗರ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರ್ಕಾರವು ಕುಡಾ ಅಧ್ಯಕ್ಷರಾಗಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿದೆ ಸದಸ್ಯರಾಗಿ ತಿಗಳ, ಯಾದವ, ಎಸ್ಸಿ, ಒಕ್ಕಲಿಗ ಸೇರಿದಂತೆ ಎಲ್ಲರಿಗೂ ಅವಕಾಶ ನೀಡಲಾಗಿದೆ ಮುಂದೆ ನಗರದ ಸಮಗ್ರ ಅಭಿವೃದ್ಧಿಗೆ ಪ್ರಮಾಣಿಕವಾಗಿ ಕೆಲಸ ಮಾಡುವುದಾಗಿ ಹೇಳಿ ಮಾದರಿಯಾಗಿಸುವುದೇ ನಮ್ಮ ಸಮಿತಿಯ ಗುರಿಯಾಗಿದೆ ಎಂದು ತಿಳಿಸಿದರು.

ಸದಸ್ಯ ಕಿಲಾರಿಪೇಟೆ ಮಣಿ ಮಾತನಾಡಿ ಕುಡಾ ಬಡಾವಣೆಯು ಪ್ರಾರಂಭವಾಗಿ ಸುಮಾರು 30 ವರ್ಷಗಳಾಗಿದ್ದು ಅಭಿವೃದ್ಧಿ ಕೊರತೆಯಾಗಿದೆ ಕೂಡಲೇ ಸರ್ಕಾರದಿಂದ ಅನುದಾನದ ಜೊತೆಗೆ ಜನಪ್ರತಿನಿಧಿಗಳ ಮಾರ್ಗದರ್ಶನದಲ್ಲಿ ಅವರ ಸಲಹೆ ಸೂಚನೆಗಳನ್ನು ಪಡೆದು ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಕೂಡಲೇ ಅಧಿಕಾರಿಗಳ ಸಭೆ ಕರೆದು ಖಾಲಿ ನಿವೇಶನಗಳ ಮಾಹಿತಿ ಪಡೆದು ಮಾರಾಟದ ಬಗ್ಗೆ ಚರ್ಚಿಸಲಾಗುತ್ತದೆ ಮುಂದಿನ ದಿನಗಳಲ್ಲಿ ಹೊಸ ಬಡಾವಣೆಗೂ ಸಹ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸದಸ್ಯೆ ಜ್ಯೋತಿ ಬ್ಯಾಂಕ್ ಮುನಿಯಪ್ಪ ಇದ್ದರು.

Ramesh Babu

Journalist

Share
Published by
Ramesh Babu

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

24 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago