Categories: ಕೋಲಾರ

ಸಾಮಾಜಿಕ ನ್ಯಾಯದ ಅಡಿಯಲ್ಲಿ ಕುಡಾಗೆ ನೂತನವಾಗಿ ಸದಸ್ಯರ ನೇಮಕ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆಯುತ್ತಿದ್ದು ಎಲ್ಲಾ ಜಾತಿ ವರ್ಗಗಳಿಗೆ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಹ ಸಾಮಾಜಿಕ ನ್ಯಾಯದ ಅಡಿಯಲ್ಲಿ ನೂತನವಾಗಿ ಸದಸ್ಯರನ್ನು ನೇಮಕ ಮಾಡುವ ಮೂಲಕ ತಾನೊಂದು ಮಾದರಿಯ ಸರ್ಕಾರವಾಗಿದೆ ಎಂಬುದನ್ನು ನಿರೂಪಿಸಿದ್ದಾರೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯ ಕೋಟೆ ಬಿ.ಟಿ ಚಂದ್ರಶೇಖರ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಿದವರಿಗೆ ಅವಕಾಶಗಳು ತಾನಾಗಿಯೇ ಸಿಗುತ್ತವೆ ಎಂಬುದಕ್ಕೆ ಇವತ್ತಿನ ನೇಮಕವೇ ಉದಾಹರಣೆಯಾಗಿವೆ ನೂತನವಾಗಿ ಸದಸ್ಯರಾಗಿ ನೇಮಕ ಮಾಡಲು ಸಹಕರಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಆಯ್ಕೆಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಇದೇ ಸಂದರ್ಭದಲ್ಲಿ ಧನ್ಯವಾದಗಳು ತಿಳಿಸಿದರು.

ಮತ್ತೊಬ್ಬ ಸದಸ್ಯ ಗಾಂಧಿನಗರ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಸರ್ಕಾರವು ಕುಡಾ ಅಧ್ಯಕ್ಷರಾಗಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿದೆ ಸದಸ್ಯರಾಗಿ ತಿಗಳ, ಯಾದವ, ಎಸ್ಸಿ, ಒಕ್ಕಲಿಗ ಸೇರಿದಂತೆ ಎಲ್ಲರಿಗೂ ಅವಕಾಶ ನೀಡಲಾಗಿದೆ ಮುಂದೆ ನಗರದ ಸಮಗ್ರ ಅಭಿವೃದ್ಧಿಗೆ ಪ್ರಮಾಣಿಕವಾಗಿ ಕೆಲಸ ಮಾಡುವುದಾಗಿ ಹೇಳಿ ಮಾದರಿಯಾಗಿಸುವುದೇ ನಮ್ಮ ಸಮಿತಿಯ ಗುರಿಯಾಗಿದೆ ಎಂದು ತಿಳಿಸಿದರು.

ಸದಸ್ಯ ಕಿಲಾರಿಪೇಟೆ ಮಣಿ ಮಾತನಾಡಿ ಕುಡಾ ಬಡಾವಣೆಯು ಪ್ರಾರಂಭವಾಗಿ ಸುಮಾರು 30 ವರ್ಷಗಳಾಗಿದ್ದು ಅಭಿವೃದ್ಧಿ ಕೊರತೆಯಾಗಿದೆ ಕೂಡಲೇ ಸರ್ಕಾರದಿಂದ ಅನುದಾನದ ಜೊತೆಗೆ ಜನಪ್ರತಿನಿಧಿಗಳ ಮಾರ್ಗದರ್ಶನದಲ್ಲಿ ಅವರ ಸಲಹೆ ಸೂಚನೆಗಳನ್ನು ಪಡೆದು ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಕೂಡಲೇ ಅಧಿಕಾರಿಗಳ ಸಭೆ ಕರೆದು ಖಾಲಿ ನಿವೇಶನಗಳ ಮಾಹಿತಿ ಪಡೆದು ಮಾರಾಟದ ಬಗ್ಗೆ ಚರ್ಚಿಸಲಾಗುತ್ತದೆ ಮುಂದಿನ ದಿನಗಳಲ್ಲಿ ಹೊಸ ಬಡಾವಣೆಗೂ ಸಹ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಸದಸ್ಯೆ ಜ್ಯೋತಿ ಬ್ಯಾಂಕ್ ಮುನಿಯಪ್ಪ ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 hour ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago