Categories: ಲೇಖನಗಳು

ಸಾಮಾಜಿಕ ಪರಿವರ್ತನೆಗಾಗಿ ಸಿದ್ಧರಾಗಿ…….

ಕೆಟ್ಟದ್ದನ್ನು, ಕೆಟ್ಟವರನ್ನು ಕೆಟ್ಟದ್ದು ಎಂದು ಹೇಳುತ್ತಾ ಆ ಕೆಟ್ಟವರಿಂದ ಕೆಟ್ಟವರೆನಿಸಿಕೊಳ್ಳುವ ಮೂಲಕ ಯಾವುದೇ ನಿರೀಕ್ಷೆ ಮತ್ತು ಪ್ರತಿಫಲ ಅಪೇಕ್ಷೆ ಇಲ್ಲದೇ, ತಾಳ್ಮೆಯಿಂದ, ಪ್ರಬುದ್ಧತೆಯಿಂದ ಸಾಮಾಜಿಕ ಪರಿವರ್ತನೆಗಾಗಿ ಹೋರಾಡುವ ಒಂದಷ್ಟು ಸಾಮಾನ್ಯ ಜನರ ಅವಶ್ಯಕತೆ ಈ ಸಮಾಜಕ್ಕೆ ಈಗ ಇದೆ…..

ಒಳ್ಳೆಯವರನ್ನು ಮತ್ತು ಒಳ್ಳೆಯದನ್ನು ಒಳ್ಳೆಯದು ಎನ್ನುವುದು, ಕೆಟ್ಟದ್ದನ್ನು ಒಳ್ಳೆಯದು ಎನ್ನುವುದು ಬಹಳ ಸುಲಭ ಮತ್ತು ಅದರಿಂದ ಯಾವುದೇ ಹಾನಿಯೂ ಇಲ್ಲ. ಸಮಸ್ಯೆ ಇರುವುದೇ ಕೆಟ್ಟವರು ಮತ್ತು ಕೆಟ್ಟ ವಿಷಯಗಳ ಬಗ್ಗೆ ಮಾತನಾಡುವಾಗ. ನೀವು ಶ್ರೀಮಂತ ಉದ್ಯಮಿಯೋ, ರಾಜಕಾರಣಿಯೋ, ಸಿನಿಮ ನಟರೋ ಅಥವಾ ಯಾವುದೇ ಹಣವಂತ ವ್ಯಕ್ತಿಯಾಗಿದ್ದು ನಿಮ್ಮ ಬಳಿ ಇರುವ ಹಣದಿಂದ ಒಂದಷ್ಟು ಜನರಿಗೆ ಅಥವಾ ಸಮಾಜಕ್ಕೆ ಸ್ವಲ್ಪ ಸಹಾಯ ಮಾಡುತ್ತಿದ್ದರೆ ನಿಮ್ಮನ್ನು ಈ ಸಮಾಜ ಅತ್ಯಂತ ಅಭಿಮಾನದಿಂದ ಆರಾಧಿಸುತ್ತದೆ, ಅಭಿಮಾನಿಸುತ್ತದೆ ಮತ್ತು ಗೌರವವನ್ನು ನೀಡುತ್ತದೆ. ಉದಾಹರಣೆಗೆ ಒಬ್ಬ ಪ್ರಖ್ಯಾತ ಮತ್ತು ಶ್ರೀಮಂತ ವ್ಯಕ್ತಿ ಕೆರೆಕಟ್ಟಿಸುವುದು, ಆಸ್ಪತ್ರೆ ಕಟ್ಟಿಸುವುದು, ಶಿಕ್ಷಣ ಸಂಸ್ಥೆ ಕಟ್ಟಿಸುವುದು, ಆ ಮೂಲಕ ಬಡವರಿಗೆ ಸಹಾಯ ಮಾಡುವುದು, ಸಂಕಷ್ಟದಲ್ಲಿರುವವರಿಗೆ ಪರಿಹಾರ ನೀಡುವುದು ಮುಂತಾದ ಏನೋ ಮಾಡಿದರೆ ಜನ ಅದೊಂದು ಮಹತ್ವದ ಉಪಕಾರ ಎಂಬಂತೆ ಸ್ಮರಿಸುತ್ತದೆ……

ಆದರೆ ಈ ಸಮಾಜದ ಅತ್ಯಂತ ಮಹತ್ವದ ವಿಷಯಗಳಾದ ಭ್ರಷ್ಟಾಚಾರ ಮತ್ತು ಜಾತಿ ವ್ಯವಸ್ಥೆಯ ಬಗ್ಗೆ, ಇಲ್ಲಿನ ಸಮಕಾಲೀನ ಸಮಸ್ಯೆಗಳ ಬಗ್ಗೆ, ಶೋಷಣೆಯ ಬಗ್ಗೆ ಮಾತನಾಡುವವರು ಯಾರು ? ಮೇಲೆ ಹೇಳಿದ ದಾನಿಗಳು ಇವುಗಳ ಬಗ್ಗೆ ಹೆಚ್ಚು ಮಾತನಾಡದೆ ರಾಜಕಾರಣಿಗಳು, ಅಧಿಕಾರಸ್ತರು, ಪತ್ರಕರ್ತರು, ಸ್ವಾಮೀಜಿಗಳು, ಸಿನಿಮಾನಟರು, ಉದ್ಯಮಿಗಳು ಇಂಥವರ ಜೊತೆ ಒಡನಾಟ ಇಟ್ಟುಕೊಂಡು ತಮ್ಮ ವ್ಯಾಪಾರ, ವಹಿವಾಟು, ಜನಪ್ರಿಯತೆಯನ್ನು ಹೆಚ್ಚು ಮಾಡಿಕೊಂಡು ತಾವು ಮತ್ತಷ್ಟು ಪ್ರಖ್ಯಾತರಾಗುತ್ತಾ, ಹಣ ಮಾಡುತ್ತಾ, ಜೀವನದ ಸುಖಭೋಗಗಳನ್ನು ಅನುಭವಿಸುತ್ತಾ, ಸಾರ್ವಜನಿಕವಾಗಿ ಒಳ್ಳೆಯ ಹೆಸರಿನೊಂದಿಗೆ ಬದುಕುತ್ತಿರುತ್ತಾರೆ……

ಹಾಗಾದರೆ ಸರ್ಕಾರದ ಭ್ರಷ್ಟಾಚಾರವನ್ನು, ಅಧಿಕಾರಿಗಳ ನಿರ್ಲಕ್ಷ್ಯವನ್ನು, ಪತ್ರಕರ್ತರ ಪಕ್ಷಪಾತವನ್ನು, ಸ್ವಾಮೀಜಿಗಳ ವಂಚನೆಯನ್ನು ಮಾತನಾಡುವವರಾದರು ಯಾರು? ಪ್ರಶ್ನಿಸುವವರಾದರು ಯಾರು?……..

ಸಾಮಾನ್ಯ ಜನರು ಇವುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಅವರಿಗೆ ಇಡೀ ವ್ಯವಸ್ಥೆಯನ್ನು ತಲುಪುವ ಶಕ್ತಿ ಇರುವುದಿಲ್ಲ. ದುರಂತವೆಂದರೆ ಆ ಶಕ್ತಿ ಇರುವವರು ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಂಡು, ಆತ್ಮ ವಂಚನೆ ಮಾಡಿಕೊಂಡು ತಾವು ಸುಖವಾಗಿರುತ್ತಾರೆ. ಇದಕ್ಕೆ ಸಾಕಷ್ಟು ಉದಾಹರಣೆಗಳನ್ನು ಕೊಡಬಹುದು…..

ನಾವು ಯಾರನ್ನು ಮಹಾನ್ ದಾನಿಗಳು, ಸಮಾಜ ಸೇವಕರು ಎಂದು ಹೇಳುತ್ತೇವೆಯೋ ಅವರುಗಳು ಆಂತರ್ಯದಲ್ಲಿ ತಮ್ಮ ಸ್ವಾರ್ಥಕ್ಕೆ ಮಹತ್ವ ಕೊಟ್ಟಿರುತ್ತಾರೆ ಎಂಬುದು ಸಾಕಷ್ಟು ಜನರಲ್ಲಿ ಕಾಣಬಹುದು. ಅಪರೂಪದ ಕೆಲವು ನಿಸ್ವಾರ್ಥರನ್ನು ಹೊರತುಪಡಿಸಿ ಯಾರೂ ಈ ವ್ಯವಸ್ಥೆಯ ದೋಷಗಳ ಬಗ್ಗೆ ನೇರವಾಗಿ ಮತ್ತು ನಿಷ್ಠುರವಾಗಿ ಮಾತನಾಡದೆ ತಮ್ಮ ವೈಯಕ್ತಿಕ ಇಮೇಜ್ ಅನ್ನು ಕಾಪಾಡಿಕೊಳ್ಳುತ್ತಾ ಪ್ರಶಸ್ತಿ, ಸನ್ಮಾನ, ಅಧಿಕಾರ, ಜನರಿಂದ ಜೈಕಾರದ ಘೋಷಣೆಗಳು, ಪತ್ರಕರ್ತರಿಂದ ವಿಶೇಷ ಕಾರ್ಯಕ್ರಮಗಳನ್ನು ಮಾಡಿಸಿಕೊಂಡು ತಾವು ಭವ್ಯ ಬಂಗಲೆಗಳಲ್ಲಿ ವಾಸಿಸುತ್ತಾ, ತಾವು ಜಾತಿವಾದಿಗಳು, ಕೋಮುವಾದಿಗಳು, ಭ್ರಷ್ಟಾಚಾರಿಗಳೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾ ಇರುತ್ತಾರೋ ಅವರ ಬಗ್ಗೆ ಸಣ್ಣ ಅಸಮಾಧಾನವಿದೆ……

ಮುಖವಾಡಗಳ ಮರೆಯಲ್ಲಿ ಎಂದು ಹೇಳುವುದು ಇದನ್ನೇ, ಅಂದರೆ ಜನರನ್ನು ಭ್ರಮೆಗಳಲ್ಲಿ ತೇಲಿಸುತ್ತಾ, ವಾಸ್ತವದಿಂದ ಅವರನ್ನು ದೂರ ಮಾಡಿ ತಾವು ತಮ್ಮ ಸುಖ ಭೋಗಕ್ಕಾಗಿ ಜನರ ಮೇಲೆ ನಿಯಂತ್ರಣ ಹೊಂದುವ ಪ್ರಕ್ರಿಯೆ. ಇನ್ನು ಎಲ್ಲರೂ ಅವರವರ ಸುರಕ್ಷತೆಯನ್ನೇ ನೋಡಿಕೊಂಡರೆ ಸಮಾಜ ಸುಧಾರಣೆ ಹೇಗೆ ಸಾಧ್ಯ. ಇದರ ಲಾಭವನ್ನೇ ರಾಜಕಾರಣಿಗಳು, ಕಾರ್ಪೊರೇಟ್ ಉದ್ಯಮಿಗಳು, ಪತ್ರಕರ್ತರು, ಸ್ವಾಮೀಜಿಗಳು ಪಡೆಯುವುದು. ಅವರಿಗೆ ತುಂಬಾ ಸ್ಪಷ್ಟವಾಗಿ ಗೊತ್ತಿದೆ ಈ ಜನ ಒಗ್ಗಟ್ಟಾಗುವುದಿಲ್ಲ, ಸಾಮಾನ್ಯ ಜನ ಅವರದೇ ಬಲೆಯೊಳಗೆ ಸಿಲುಕಿದ್ದಾರೆ, ಅವರನ್ನು ವಂಚಿಸುವುದು ಅಥವಾ ಶೋಷಿಸುವುದು ಬಹಳ ಸುಲಭ. ಅವರು ಹಾಗೆಯೇ ಇರಲಿ ಅಂದರೆ ಬಡತನ ಮತ್ತು ಬಡವರು ಹಾಗೆ ಇರಲಿ ನಾವು ಶ್ರೀಮಂತರಾಗುತ್ತ ಬಿಡಿಗಾಸನ್ನು ಅವರಿಗೆ ಸೇವೆ ಹೆಸರಲ್ಲಿ ಚೆಲ್ಲುತ್ತಾ ಆರಾಮಾಗಿರಬಹುದು, ವ್ಯವಸ್ಥೆಯ ಹುಳುಕುಗಳನ್ನು ಅವರಿಗೆ ಮನವರಿಕೆ ಮಾಡಿಕೊಟ್ಟರೆ ಅದು ನಮ್ಮ ಬುಡಕ್ಕೆ ಬರುತ್ತದೆ. ಆದ್ದರಿಂದ ಈಗಿರುವ ವ್ಯವಸ್ಥೆಯೇ ಉತ್ತಮ ಎಂಬುದು ಆ ದೊಡ್ಡ ವ್ಯಕ್ತಿಗಳ ಆಂತರ್ಯದ ಆಸೆ……

ಆದ್ದರಿಂದ ಕೆಟ್ಟವರನ್ನು ಕೆಟ್ಟದ್ದನ್ನು ಕೆಟ್ಟದ್ದು ಎಂದು ಹೇಳುವ ಧೈರ್ಯ ತೋರಿಸೋಣ ಆಗ ಮಾತ್ರ ಒಂದು ಸಣ್ಣ ಪರಿವರ್ತನೆ ಸಾಧ್ಯ. ಇಲ್ಲದಿದ್ದರೆ ವ್ಯವಸ್ಥೆ ಹೀಗೇ ಮುಂದುವರೆದರಿಯುತ್ತದೆ. ಸ್ವಲ್ಪ ತ್ಯಾಗಕ್ಕೆ ಸಿದ್ದರಾಗಿ. ಆಯ್ಕೆ ನಿಮ್ಮ ಮುಂದಿದೆ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

13 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago