ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ

ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ
ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ.

ಅದರಂತೆ ಆಯೋಗದಿಂದ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ನ್ನು (Affidavit) ಅ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.

2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು WhatsApp ನಲ್ಲಿ ಹಂಚಿಕೆ (share) ಮಾಡಿರುವ ಮೊಬೈಲ್ ಸಂಖ್ಯೆ: 8618891657 ಮತ್ತು 9972508500 ರ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ.

ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಾದ WhatsApp, Facebook, Twitter, Instagram ಇತ್ಯಾದಿಗಳಲ್ಲಿ ಹಂಚಿಕೊಂಡಲ್ಲಿ ಇದಕ್ಕೆ ಕಾರಣರಾಗಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆದ್ದರಿಂದ ಈ ರೀತಿ ಯಾವುದೇ ಸುಳ್ಳು/ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು forward ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

2 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

3 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

14 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

16 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago