ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ
ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ.
ಅದರಂತೆ ಆಯೋಗದಿಂದ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ನ್ನು (Affidavit) ಅ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.
2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು WhatsApp ನಲ್ಲಿ ಹಂಚಿಕೆ (share) ಮಾಡಿರುವ ಮೊಬೈಲ್ ಸಂಖ್ಯೆ: 8618891657 ಮತ್ತು 9972508500 ರ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ.
ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಾದ WhatsApp, Facebook, Twitter, Instagram ಇತ್ಯಾದಿಗಳಲ್ಲಿ ಹಂಚಿಕೊಂಡಲ್ಲಿ ಇದಕ್ಕೆ ಕಾರಣರಾಗಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಆದ್ದರಿಂದ ಈ ರೀತಿ ಯಾವುದೇ ಸುಳ್ಳು/ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು forward ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…