ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ಓದಿ….

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು ಈ ಕೆಳಕಂಡಂತಿವೆ….

• ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.

• ಸಮೀಕ್ಷೆ ಕಾರ್ಯಕ್ಕೆ ಮುಂದೆಯೂ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.

• ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ.

• ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು.

• ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು.

• ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ‌

• ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

• ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು.

• ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಲಾಗುವುದು.

• ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಲಾಗುವುದು.

• ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕಿದೆ. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು.

• ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.

• ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.

• ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.

Ramesh Babu

Journalist

Recent Posts

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

4 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

4 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

17 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

19 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

19 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

1 day ago