ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 3286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

*ಆಧಾರ್ ಕಾರ್ಡ್ ಕಡ್ಡಾಯ*

ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್ ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್ ಕಾರ್ಡ್ ನ ಮೊಬೈಲ್ ನಂಬರ್ ಗೆ ಒಟಿಪಿ ಬರುತ್ತದೆ. ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿ. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ ಎಂದರು. ಗಣತೀದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು ಎಂದರು.

ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

*ಸಹಾಯವಾಣಿ ಸಂಪರ್ಕಿಸಿ*

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 05 (Help Line) ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತವೆ. ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ ದೂರವಾಣಿ ಸಂಖ್ಯೆ 080-22449999,
ದೇವನಹಳ್ಳಿ-9036858653, ದೊಡ್ಡಬಳ್ಳಾಪುರ-8884579990, ಹೊಸಕೋಟೆ-080-27931104, ನೆಲಮಂಗಲ-9740100884. ಸಮೀಕ್ಷೆಯ ಕುರಿತು ಏನಾದರೂ ಸಂದೇಹಗಳಿದ್ದಲ್ಲಿ ಸಹಾಯವಾಣಿಯನ್ನು ಬೆಳಿಗ್ಗೆ 7.00 ರಿಂದ ಸಂಜೆ 7.00 ರವರೆಗೆ ಸಂಪರ್ಕಿಸಿ.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮುನಿಕೃಷ್ಣ, ಉಪಾಧ್ಯಕ್ಷರಾದ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ತಹಶೀಲ್ದಾರ್ ಅನಿಲ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

11 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

14 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

16 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

18 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

19 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

1 day ago