ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 3286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

*ಆಧಾರ್ ಕಾರ್ಡ್ ಕಡ್ಡಾಯ*

ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್ ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್ ಕಾರ್ಡ್ ನ ಮೊಬೈಲ್ ನಂಬರ್ ಗೆ ಒಟಿಪಿ ಬರುತ್ತದೆ. ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿ. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ ಎಂದರು. ಗಣತೀದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು ಎಂದರು.

ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

*ಸಹಾಯವಾಣಿ ಸಂಪರ್ಕಿಸಿ*

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 05 (Help Line) ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತವೆ. ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ ದೂರವಾಣಿ ಸಂಖ್ಯೆ 080-22449999,
ದೇವನಹಳ್ಳಿ-9036858653, ದೊಡ್ಡಬಳ್ಳಾಪುರ-8884579990, ಹೊಸಕೋಟೆ-080-27931104, ನೆಲಮಂಗಲ-9740100884. ಸಮೀಕ್ಷೆಯ ಕುರಿತು ಏನಾದರೂ ಸಂದೇಹಗಳಿದ್ದಲ್ಲಿ ಸಹಾಯವಾಣಿಯನ್ನು ಬೆಳಿಗ್ಗೆ 7.00 ರಿಂದ ಸಂಜೆ 7.00 ರವರೆಗೆ ಸಂಪರ್ಕಿಸಿ.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮುನಿಕೃಷ್ಣ, ಉಪಾಧ್ಯಕ್ಷರಾದ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ತಹಶೀಲ್ದಾರ್ ಅನಿಲ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

6 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

11 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

11 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

19 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago