ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ-2025 ಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಇಂದು ದೇವನಹಳ್ಳಿ ಟೌನ್ ನ 16 ನೇ ವಾರ್ಡ್ ನಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಆಯೋಗವು ಸಮೀಕ್ಷಾ ಕಾರ್ಯವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 3286 ಗಣತೀದಾರರನ್ನು 194 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು ಸಮೀಕ್ಷೆ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
*ಆಧಾರ್ ಕಾರ್ಡ್ ಕಡ್ಡಾಯ*
ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸಾರ್ವಜನಿಕರು ಆಧಾರ್ ಕಾರ್ಡ್ ಇ-ಕೈವೈಸಿ ಕಡ್ಡಾಯವಾಗಿ ಮಾಡಿರಬೇಕು, ಇ-ಕೆವೈಸಿ ಮಾಡಿರುವ ಆಧಾರ್ ಕಾರ್ಡ್ ನ ಮೊಬೈಲ್ ನಂಬರ್ ಗೆ ಒಟಿಪಿ ಬರುತ್ತದೆ. ಇ-ಕೆವೈಸಿ ಮಾಡಿಸದವರು ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಇ- ಕೆವೈಸಿ ಮಾಡಿಸಿ. ಇದರಿಂದ ಸಮೀಕ್ಷೆಗೆ ದತ್ತಾಂಶ ಸಂಗ್ರಹಿಸಲು ಅನುಕೂಲವಾಗಲಿದೆ ಎಂದರು. ಗಣತೀದಾರರು ಕೇಳುವಂತಹ ಪ್ರಶ್ನೆಗಳಿಗೆ ಸಾರ್ವಜನಿಕರು ಸರಿಯಾಗಿ ಸಮರ್ಪಕ ಉತ್ತರ ನೀಡಿ ಸಮೀಕ್ಷೆ ಯಶಸ್ಸಿಗೆ ಸಹಕರಿಸಬೇಕು ಎಂದರು.
ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
*ಸಹಾಯವಾಣಿ ಸಂಪರ್ಕಿಸಿ*
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 05 (Help Line) ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತವೆ. ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿ ದೂರವಾಣಿ ಸಂಖ್ಯೆ 080-22449999,
ದೇವನಹಳ್ಳಿ-9036858653, ದೊಡ್ಡಬಳ್ಳಾಪುರ-8884579990, ಹೊಸಕೋಟೆ-080-27931104, ನೆಲಮಂಗಲ-9740100884. ಸಮೀಕ್ಷೆಯ ಕುರಿತು ಏನಾದರೂ ಸಂದೇಹಗಳಿದ್ದಲ್ಲಿ ಸಹಾಯವಾಣಿಯನ್ನು ಬೆಳಿಗ್ಗೆ 7.00 ರಿಂದ ಸಂಜೆ 7.00 ರವರೆಗೆ ಸಂಪರ್ಕಿಸಿ.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮುನಿಕೃಷ್ಣ, ಉಪಾಧ್ಯಕ್ಷರಾದ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಲಕ್ಷ್ಮಿಕಾಂತ್, ತಹಶೀಲ್ದಾರ್ ಅನಿಲ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…