ಸಾಯುವ ಕೊನೆ ಕ್ಷಣದಲ್ಲಿ ವಿಡಿಯೋ ಮಾಡಿ ಅಂತ್ಯಕ್ರಿಯೆಗೆ ಬರುವಂತೆ ತನ್ನ ಪ್ರಿಯತಮೆಗೆ ಆಹ್ವಾನ ನೀಡಿ, ಹುಟ್ಟೋ ಮಗುವಿಗೆ ನನ್ನ ಹೆಸರಿಡು ಎಂದು ಪ್ರಾಣಬಿಟ್ಟ ಪ್ರಿಯಕರ

ನೆಲಮಂಗಲ: ಆತನಿಗೆ ಇನ್ನೂ 22 ವರ್ಷ. ಚಿಕ್ಕ ವಯಸ್ಸಿನಲ್ಲೇ ರೇಬಿಸ್ ಕಾಯಿಲೆ ಒಕ್ಕರಿಸಿತ್ತು, ರೋಗ ಉಲ್ಬಣಗೊಂಡು ಸಾಯೋ ಸ್ಥಿತಿಗೆ ತಂದಿತ್ತು. ರೋಗ ವಾಸಿ‌ ಮಾಡಿಕೊಳ್ಳಲು ಆಸ್ಪತ್ರೆಗೆ ಸೇರಿದ್ದ ಆದರೆ ಚಿಕಿತ್ಸೆ ಫಲಿಸಲಿಲ್ಲ. ತಾನು ಸಾವನ್ನಪ್ಪುತ್ತಿದ್ದೇನೆ ಎಂದು ತಿಳಿದಾತ ಕೊನೆ ಬಾರಿ ಕರಳು ಹಿಂಡುವ ವಿಡಿಯೋ ಒಂದನ್ನು ಮಾಡಿಸುತ್ತಾನೆ. ಆ ವಿಡಿಯೋ ತನ್ನ ಪ್ರಿಯತಮೆಗೆ ಮಹತ್ತರವಾದ ಸಂದೇಶ ಕಳಿಸುವುದಾಗಿರುತ್ತದೆ.

ಆ ವಿಡಿಯೋ ಮಾಡಿದಾತ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ 22ವರ್ಷದ ಯುವಕ ಕಿರಣ್. ಆಗಸ್ಟ್ 9 ರಂದು ವಿಡಿಯೋದಲ್ಲಿ ಮಾತನಾಡುತ್ತಾ ಪ್ರಿಯತಮೆಗೆ ಏನೂ ಹೇಳಬೇಕೋ ಅದನ್ನು ಹೇಳಿ ಸಾವನ್ನಪ್ಪುತ್ತಾನೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯೆಸ್ ಕಿರಣ್ ಗೆ ತನ್ನ ಸಾವಿನ ಕ್ಷಣಗಳ ಅರಿವಾಗಿತ್ತು. ತಾನು ಪ್ರೀತಿಸಿದ ಹುಡುಗಿಯ ನೆನಪಾಗಿ ಸಾಯುವ ಕೊನೆಯ ಕ್ಷಣದಲ್ಲಿ ಲೈವ್ ವಿಡಿಯೋ ಮಾಡಿದ್ದಾನೆ, ಅದು ಏನಂದರೆ “ಹಾಯ್ ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಆಗು. ನಿನಗೆ ಹುಟ್ಟುವ ಮಗುವಿಗೆ ನನ್ನ ಹೆಸರಿಡಬೇಕು. ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗು. ಜೊತೆಗೆ ಯಮುನಾ ಮತ್ತು ನಿನ್ನ ತಾಯಿಯನ್ನೂ ಕರೆದುಕೊಂಡು ಬಾ. ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ…….” ಹೀಗೆ ಚನ್ನಾಗಿರಿ ಎಂದು ಕಿರಣ್ ಲೈವ್​​ ವಿಡಿಯೋ ಮಾಡುತ್ತಲೇ ಕೈ ಮುಗಿದು ಆಸ್ಪತ್ರೆಯ ಬೆಡ್ ಮೇಲೆಯೇ ನಗುನಗುತಾ ಉಸಿರು ಚೆಲ್ಲಿದ್ದಾನೆ.

ಈ ಕರಳು ಹಿಂಡುವ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕಣ್ಣಲ್ಲಿ ನೀರು ಬರುವುದು ಖಚಿತ.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

3 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

4 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

17 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

18 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

20 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

24 hours ago