ಸಾಯುವ ಕೊನೆ ಕ್ಷಣದಲ್ಲಿ ವಿಡಿಯೋ ಮಾಡಿ ಅಂತ್ಯಕ್ರಿಯೆಗೆ ಬರುವಂತೆ ತನ್ನ ಪ್ರಿಯತಮೆಗೆ ಆಹ್ವಾನ ನೀಡಿ, ಹುಟ್ಟೋ ಮಗುವಿಗೆ ನನ್ನ ಹೆಸರಿಡು ಎಂದು ಪ್ರಾಣಬಿಟ್ಟ ಪ್ರಿಯಕರ

ನೆಲಮಂಗಲ: ಆತನಿಗೆ ಇನ್ನೂ 22 ವರ್ಷ. ಚಿಕ್ಕ ವಯಸ್ಸಿನಲ್ಲೇ ರೇಬಿಸ್ ಕಾಯಿಲೆ ಒಕ್ಕರಿಸಿತ್ತು, ರೋಗ ಉಲ್ಬಣಗೊಂಡು ಸಾಯೋ ಸ್ಥಿತಿಗೆ ತಂದಿತ್ತು. ರೋಗ ವಾಸಿ‌ ಮಾಡಿಕೊಳ್ಳಲು ಆಸ್ಪತ್ರೆಗೆ ಸೇರಿದ್ದ ಆದರೆ ಚಿಕಿತ್ಸೆ ಫಲಿಸಲಿಲ್ಲ. ತಾನು ಸಾವನ್ನಪ್ಪುತ್ತಿದ್ದೇನೆ ಎಂದು ತಿಳಿದಾತ ಕೊನೆ ಬಾರಿ ಕರಳು ಹಿಂಡುವ ವಿಡಿಯೋ ಒಂದನ್ನು ಮಾಡಿಸುತ್ತಾನೆ. ಆ ವಿಡಿಯೋ ತನ್ನ ಪ್ರಿಯತಮೆಗೆ ಮಹತ್ತರವಾದ ಸಂದೇಶ ಕಳಿಸುವುದಾಗಿರುತ್ತದೆ.

ಆ ವಿಡಿಯೋ ಮಾಡಿದಾತ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ 22ವರ್ಷದ ಯುವಕ ಕಿರಣ್. ಆಗಸ್ಟ್ 9 ರಂದು ವಿಡಿಯೋದಲ್ಲಿ ಮಾತನಾಡುತ್ತಾ ಪ್ರಿಯತಮೆಗೆ ಏನೂ ಹೇಳಬೇಕೋ ಅದನ್ನು ಹೇಳಿ ಸಾವನ್ನಪ್ಪುತ್ತಾನೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯೆಸ್ ಕಿರಣ್ ಗೆ ತನ್ನ ಸಾವಿನ ಕ್ಷಣಗಳ ಅರಿವಾಗಿತ್ತು. ತಾನು ಪ್ರೀತಿಸಿದ ಹುಡುಗಿಯ ನೆನಪಾಗಿ ಸಾಯುವ ಕೊನೆಯ ಕ್ಷಣದಲ್ಲಿ ಲೈವ್ ವಿಡಿಯೋ ಮಾಡಿದ್ದಾನೆ, ಅದು ಏನಂದರೆ “ಹಾಯ್ ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಆಗು. ನಿನಗೆ ಹುಟ್ಟುವ ಮಗುವಿಗೆ ನನ್ನ ಹೆಸರಿಡಬೇಕು. ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗು. ಜೊತೆಗೆ ಯಮುನಾ ಮತ್ತು ನಿನ್ನ ತಾಯಿಯನ್ನೂ ಕರೆದುಕೊಂಡು ಬಾ. ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ…….” ಹೀಗೆ ಚನ್ನಾಗಿರಿ ಎಂದು ಕಿರಣ್ ಲೈವ್​​ ವಿಡಿಯೋ ಮಾಡುತ್ತಲೇ ಕೈ ಮುಗಿದು ಆಸ್ಪತ್ರೆಯ ಬೆಡ್ ಮೇಲೆಯೇ ನಗುನಗುತಾ ಉಸಿರು ಚೆಲ್ಲಿದ್ದಾನೆ.

ಈ ಕರಳು ಹಿಂಡುವ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕಣ್ಣಲ್ಲಿ ನೀರು ಬರುವುದು ಖಚಿತ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

19 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

22 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

22 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago