ಸಾಯುವ ಕೊನೆ ಕ್ಷಣದಲ್ಲಿ ವಿಡಿಯೋ ಮಾಡಿ ಅಂತ್ಯಕ್ರಿಯೆಗೆ ಬರುವಂತೆ ತನ್ನ ಪ್ರಿಯತಮೆಗೆ ಆಹ್ವಾನ ನೀಡಿ, ಹುಟ್ಟೋ ಮಗುವಿಗೆ ನನ್ನ ಹೆಸರಿಡು ಎಂದು ಪ್ರಾಣಬಿಟ್ಟ ಪ್ರಿಯಕರ

ನೆಲಮಂಗಲ: ಆತನಿಗೆ ಇನ್ನೂ 22 ವರ್ಷ. ಚಿಕ್ಕ ವಯಸ್ಸಿನಲ್ಲೇ ರೇಬಿಸ್ ಕಾಯಿಲೆ ಒಕ್ಕರಿಸಿತ್ತು, ರೋಗ ಉಲ್ಬಣಗೊಂಡು ಸಾಯೋ ಸ್ಥಿತಿಗೆ ತಂದಿತ್ತು. ರೋಗ ವಾಸಿ‌ ಮಾಡಿಕೊಳ್ಳಲು ಆಸ್ಪತ್ರೆಗೆ ಸೇರಿದ್ದ ಆದರೆ ಚಿಕಿತ್ಸೆ ಫಲಿಸಲಿಲ್ಲ. ತಾನು ಸಾವನ್ನಪ್ಪುತ್ತಿದ್ದೇನೆ ಎಂದು ತಿಳಿದಾತ ಕೊನೆ ಬಾರಿ ಕರಳು ಹಿಂಡುವ ವಿಡಿಯೋ ಒಂದನ್ನು ಮಾಡಿಸುತ್ತಾನೆ. ಆ ವಿಡಿಯೋ ತನ್ನ ಪ್ರಿಯತಮೆಗೆ ಮಹತ್ತರವಾದ ಸಂದೇಶ ಕಳಿಸುವುದಾಗಿರುತ್ತದೆ.

ಆ ವಿಡಿಯೋ ಮಾಡಿದಾತ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ 22ವರ್ಷದ ಯುವಕ ಕಿರಣ್. ಆಗಸ್ಟ್ 9 ರಂದು ವಿಡಿಯೋದಲ್ಲಿ ಮಾತನಾಡುತ್ತಾ ಪ್ರಿಯತಮೆಗೆ ಏನೂ ಹೇಳಬೇಕೋ ಅದನ್ನು ಹೇಳಿ ಸಾವನ್ನಪ್ಪುತ್ತಾನೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯೆಸ್ ಕಿರಣ್ ಗೆ ತನ್ನ ಸಾವಿನ ಕ್ಷಣಗಳ ಅರಿವಾಗಿತ್ತು. ತಾನು ಪ್ರೀತಿಸಿದ ಹುಡುಗಿಯ ನೆನಪಾಗಿ ಸಾಯುವ ಕೊನೆಯ ಕ್ಷಣದಲ್ಲಿ ಲೈವ್ ವಿಡಿಯೋ ಮಾಡಿದ್ದಾನೆ, ಅದು ಏನಂದರೆ “ಹಾಯ್ ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಆಗು. ನಿನಗೆ ಹುಟ್ಟುವ ಮಗುವಿಗೆ ನನ್ನ ಹೆಸರಿಡಬೇಕು. ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗು. ಜೊತೆಗೆ ಯಮುನಾ ಮತ್ತು ನಿನ್ನ ತಾಯಿಯನ್ನೂ ಕರೆದುಕೊಂಡು ಬಾ. ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ…….” ಹೀಗೆ ಚನ್ನಾಗಿರಿ ಎಂದು ಕಿರಣ್ ಲೈವ್​​ ವಿಡಿಯೋ ಮಾಡುತ್ತಲೇ ಕೈ ಮುಗಿದು ಆಸ್ಪತ್ರೆಯ ಬೆಡ್ ಮೇಲೆಯೇ ನಗುನಗುತಾ ಉಸಿರು ಚೆಲ್ಲಿದ್ದಾನೆ.

ಈ ಕರಳು ಹಿಂಡುವ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕಣ್ಣಲ್ಲಿ ನೀರು ಬರುವುದು ಖಚಿತ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

4 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

12 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

17 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago