ಸಾಯುವ ಕೊನೆ ಕ್ಷಣದಲ್ಲಿ ವಿಡಿಯೋ ಮಾಡಿ ಅಂತ್ಯಕ್ರಿಯೆಗೆ ಬರುವಂತೆ ತನ್ನ ಪ್ರಿಯತಮೆಗೆ ಆಹ್ವಾನ ನೀಡಿ, ಹುಟ್ಟೋ ಮಗುವಿಗೆ ನನ್ನ ಹೆಸರಿಡು ಎಂದು ಪ್ರಾಣಬಿಟ್ಟ ಪ್ರಿಯಕರ

ನೆಲಮಂಗಲ: ಆತನಿಗೆ ಇನ್ನೂ 22 ವರ್ಷ. ಚಿಕ್ಕ ವಯಸ್ಸಿನಲ್ಲೇ ರೇಬಿಸ್ ಕಾಯಿಲೆ ಒಕ್ಕರಿಸಿತ್ತು, ರೋಗ ಉಲ್ಬಣಗೊಂಡು ಸಾಯೋ ಸ್ಥಿತಿಗೆ ತಂದಿತ್ತು. ರೋಗ ವಾಸಿ‌ ಮಾಡಿಕೊಳ್ಳಲು ಆಸ್ಪತ್ರೆಗೆ ಸೇರಿದ್ದ ಆದರೆ ಚಿಕಿತ್ಸೆ ಫಲಿಸಲಿಲ್ಲ. ತಾನು ಸಾವನ್ನಪ್ಪುತ್ತಿದ್ದೇನೆ ಎಂದು ತಿಳಿದಾತ ಕೊನೆ ಬಾರಿ ಕರಳು ಹಿಂಡುವ ವಿಡಿಯೋ ಒಂದನ್ನು ಮಾಡಿಸುತ್ತಾನೆ. ಆ ವಿಡಿಯೋ ತನ್ನ ಪ್ರಿಯತಮೆಗೆ ಮಹತ್ತರವಾದ ಸಂದೇಶ ಕಳಿಸುವುದಾಗಿರುತ್ತದೆ.

ಆ ವಿಡಿಯೋ ಮಾಡಿದಾತ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ 22ವರ್ಷದ ಯುವಕ ಕಿರಣ್. ಆಗಸ್ಟ್ 9 ರಂದು ವಿಡಿಯೋದಲ್ಲಿ ಮಾತನಾಡುತ್ತಾ ಪ್ರಿಯತಮೆಗೆ ಏನೂ ಹೇಳಬೇಕೋ ಅದನ್ನು ಹೇಳಿ ಸಾವನ್ನಪ್ಪುತ್ತಾನೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯೆಸ್ ಕಿರಣ್ ಗೆ ತನ್ನ ಸಾವಿನ ಕ್ಷಣಗಳ ಅರಿವಾಗಿತ್ತು. ತಾನು ಪ್ರೀತಿಸಿದ ಹುಡುಗಿಯ ನೆನಪಾಗಿ ಸಾಯುವ ಕೊನೆಯ ಕ್ಷಣದಲ್ಲಿ ಲೈವ್ ವಿಡಿಯೋ ಮಾಡಿದ್ದಾನೆ, ಅದು ಏನಂದರೆ “ಹಾಯ್ ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಆಗು. ನಿನಗೆ ಹುಟ್ಟುವ ಮಗುವಿಗೆ ನನ್ನ ಹೆಸರಿಡಬೇಕು. ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗು. ಜೊತೆಗೆ ಯಮುನಾ ಮತ್ತು ನಿನ್ನ ತಾಯಿಯನ್ನೂ ಕರೆದುಕೊಂಡು ಬಾ. ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿ…….” ಹೀಗೆ ಚನ್ನಾಗಿರಿ ಎಂದು ಕಿರಣ್ ಲೈವ್​​ ವಿಡಿಯೋ ಮಾಡುತ್ತಲೇ ಕೈ ಮುಗಿದು ಆಸ್ಪತ್ರೆಯ ಬೆಡ್ ಮೇಲೆಯೇ ನಗುನಗುತಾ ಉಸಿರು ಚೆಲ್ಲಿದ್ದಾನೆ.

ಈ ಕರಳು ಹಿಂಡುವ ವಿಡಿಯೋ ನೋಡಿದ ಪ್ರತಿಯೊಬ್ಬರಿಗೂ ಕಣ್ಣಲ್ಲಿ ನೀರು ಬರುವುದು ಖಚಿತ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

3 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

4 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

5 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

5 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

9 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

11 hours ago