ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಪೂರ್ವ ಕಿಂಕೋ ನೌಕರರ ವೇತನವನ್ನು ಶೇ.12.50ರಷ್ಟು ಹೆಚ್ಚಿಸಲು ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದ ಪ್ರಕಾರ, ದಿನಾಂಕ 31.03.2025ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇ.12.50ರಷ್ಟು ಹೆಚ್ಚಿಸಿ, ಉನ್ನತ ವೇತನ ಶ್ರೇಣಿ ಹಾಗೂ ಮಧ್ಯಂತರ (Selection Grade) ವೇತನ ಶ್ರೇಣಿಗಳನ್ನು ಪರಿಷ್ಕರಿಸಲಾಗುವುದು. ಈ ಪರಿಷ್ಕರಣೆ 01.04.2025ರಿಂದ ಜಾರಿಯಾಗಲಿದ್ದು, 01.07.2026ರ ಮಾಹೆಯ ವೇತನದಲ್ಲಿ ಅನುಷ್ಠಾನಗೊಳ್ಳಲಿದೆ.
ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು 01.04.2025ರಿಂದ 30.06.2026ರ ಅವಧಿಗೆ ಸಂಬಂಧಿಸಿದಂತೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಂತ ಹಂತವಾಗಿ ಪಾವತಿಸಲಾಗುವುದು. ಸಾರಿಗೆ ನಿಗಮಗಳು ಕಳೆದ ಹಲವು ವರ್ಷಗಳಿಂದ ನಷ್ಟ ಅನುಭವಿಸುತ್ತಿರುವುದರಿಂದ, ಪ್ರಸ್ತುತ ರೂ.7130.80 ಕೋಟಿ ಹೊಣೆಗಾರಿಕೆ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಹಿಂಬಾಕಿ ಪಾವತಿ ಹಂತ ಹಂತವಾಗಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಆದೇಶವನ್ನು ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಹೊರಡಿಸಿದ್ದು, ಪ್ರಧಾನ ಮಹಾಲೇಖಪಾಲರು ಹಾಗೂ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ.
ಈ ನಿರ್ಧಾರದಿಂದ ಸಾರಿಗೆ ನಿಗಮಗಳ ಸಾವಿರಾರು ನೌಕರರು ಮತ್ತು ಅಧಿಕಾರಿಗಳಿಗೆ ಆರ್ಥಿಕ ನೆರವು ದೊರೆಯಲಿದ್ದು, ನಾಲ್ಕು ವರ್ಷದ ಅವಧಿಗೆ (01.04.2025ರಿಂದ 31.03.2029ರವರೆಗೆ) ವೇತನ ಪರಿಷ್ಕರಣೆ ಜಾರಿಯಲ್ಲಿರಲಿದೆ.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…