ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಪೂರ್ವ ಕಿಂಕೋ ನೌಕರರ ವೇತನವನ್ನು ಶೇ.12.50ರಷ್ಟು ಹೆಚ್ಚಿಸಲು ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದ ಪ್ರಕಾರ, ದಿನಾಂಕ 31.03.2025ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇ.12.50ರಷ್ಟು ಹೆಚ್ಚಿಸಿ, ಉನ್ನತ ವೇತನ ಶ್ರೇಣಿ ಹಾಗೂ ಮಧ್ಯಂತರ (Selection Grade) ವೇತನ ಶ್ರೇಣಿಗಳನ್ನು ಪರಿಷ್ಕರಿಸಲಾಗುವುದು. ಈ ಪರಿಷ್ಕರಣೆ 01.04.2025ರಿಂದ ಜಾರಿಯಾಗಲಿದ್ದು, 01.07.2026ರ ಮಾಹೆಯ ವೇತನದಲ್ಲಿ ಅನುಷ್ಠಾನಗೊಳ್ಳಲಿದೆ.
ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು 01.04.2025ರಿಂದ 30.06.2026ರ ಅವಧಿಗೆ ಸಂಬಂಧಿಸಿದಂತೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಂತ ಹಂತವಾಗಿ ಪಾವತಿಸಲಾಗುವುದು. ಸಾರಿಗೆ ನಿಗಮಗಳು ಕಳೆದ ಹಲವು ವರ್ಷಗಳಿಂದ ನಷ್ಟ ಅನುಭವಿಸುತ್ತಿರುವುದರಿಂದ, ಪ್ರಸ್ತುತ ರೂ.7130.80 ಕೋಟಿ ಹೊಣೆಗಾರಿಕೆ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಹಿಂಬಾಕಿ ಪಾವತಿ ಹಂತ ಹಂತವಾಗಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಆದೇಶವನ್ನು ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಹೊರಡಿಸಿದ್ದು, ಪ್ರಧಾನ ಮಹಾಲೇಖಪಾಲರು ಹಾಗೂ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ.
ಈ ನಿರ್ಧಾರದಿಂದ ಸಾರಿಗೆ ನಿಗಮಗಳ ಸಾವಿರಾರು ನೌಕರರು ಮತ್ತು ಅಧಿಕಾರಿಗಳಿಗೆ ಆರ್ಥಿಕ ನೆರವು ದೊರೆಯಲಿದ್ದು, ನಾಲ್ಕು ವರ್ಷದ ಅವಧಿಗೆ (01.04.2025ರಿಂದ 31.03.2029ರವರೆಗೆ) ವೇತನ ಪರಿಷ್ಕರಣೆ ಜಾರಿಯಲ್ಲಿರಲಿದೆ.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…