ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವುಮಾಡಿಕೊಡಲಾಗುವುದು ಎಂದು ತಿಳಿಸಿದಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿ ವ್ಯವಸ್ಥೆ ಜಾರಿ ಮಾಡಲು ತೀರ್ಮಾನಕ್ಕೆ ಬರಲಾಗಿದೆ. ಅಧಿಕೃತ ಘೋಷಣೆಯೊಂದೇ ಬಾಕಿ
ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್ನಲ್ಲಿ ಟಿಕೆಟ್ ಪಡೆಯದೇ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇಂದು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಯಾಬಿನೆಟ್ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ. ಆ ಬಳಿಕ ಎಲ್ಲವು ಗೊತ್ತಾಗಲಿದೆ ಎಂದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…