ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವುಮಾಡಿಕೊಡಲಾಗುವುದು ಎಂದು ತಿಳಿಸಿದಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿ ವ್ಯವಸ್ಥೆ ಜಾರಿ ಮಾಡಲು ತೀರ್ಮಾನಕ್ಕೆ ಬರಲಾಗಿದೆ. ಅಧಿಕೃತ ಘೋಷಣೆಯೊಂದೇ ಬಾಕಿ
ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್ನಲ್ಲಿ ಟಿಕೆಟ್ ಪಡೆಯದೇ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇಂದು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಯಾಬಿನೆಟ್ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ. ಆ ಬಳಿಕ ಎಲ್ಲವು ಗೊತ್ತಾಗಲಿದೆ ಎಂದರು.
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…