ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವುಮಾಡಿಕೊಡಲಾಗುವುದು ಎಂದು ತಿಳಿಸಿದಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿ ವ್ಯವಸ್ಥೆ ಜಾರಿ ಮಾಡಲು ತೀರ್ಮಾನಕ್ಕೆ ಬರಲಾಗಿದೆ. ಅಧಿಕೃತ ಘೋಷಣೆಯೊಂದೇ ಬಾಕಿ
ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್ನಲ್ಲಿ ಟಿಕೆಟ್ ಪಡೆಯದೇ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇಂದು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಯಾಬಿನೆಟ್ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ. ಆ ಬಳಿಕ ಎಲ್ಲವು ಗೊತ್ತಾಗಲಿದೆ ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…