Categories: ಕೋಲಾರ

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ನಿರುದ್ಯೋಗಿಗಳು, ಮನೆ ದುರಸ್ತಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಶಾಸಕರ ಮುಂದೆ ಹೇಳಿಕೊಂಡರು. ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಅ ಕಾರ್ಯಕ್ರಮದಿಂದ ರೈತರು, ಜನಸಾಮಾನ್ಯರು ಜಿಲ್ಲಾ ಮತ್ತು ತಾಲೂಕು ಕೇಂದ್ರಕ್ಕೆ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ರವೀಂದ್ರನಾಥ್, ಮುಂತಾದವರು ಇದ್ದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

52 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

59 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

7 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago