ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಪತ್ತೆಹಚ್ಚಿ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ವೇಳೆ ತಿಳಿದುಬಂದ ಅಂಶವೇನೆಂದರೆ, ಈ ಪ್ರಕರಣಗಳಂತೆಯೆ ಭಾರತದಾದ್ಯಂತ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್ನಲ್ಲಿ ದಾಖಲಾಗಿರುತ್ತದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ, ಅದರಲ್ಲಿ 135 ಪ್ರಕರಣಗಳು ಬೆಂಗಳೂರು ನಗರದ ವ್ಯಾಪ್ತಿಗೆ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯವು 158,094,159 ರೂ. ಎಂದು ಕಂಡುಬಂದಿದೆ. ಅದರಲ್ಲಿ 62,83,080 ಹಣವನ್ನು 30 ವಿವಿಧ ಬ್ಯಾಂಕ್ ಖಾತೆಗಳಿಂದ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್ಗಳು, 2 ಲ್ಯಾಪ್ಟಾಪ್ಗಳು, 15 ಸಿಮ್ ಕಾರ್ಡ್ಗಳು, 3 ಬ್ಯಾಂಕ್ ಚೆಕ್ ಬುಕ್ಗಳು ಹಾಗೂ ಇದಕ್ಕೆ ಸಂಬಂಧಪಟ್ಟಂತಹ ಇತರೇ ದಾಖಲಾತಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದರು.
ಕೆ.ಆರ್. ಪುರ ಪೊಲೀಸ್ ಠಾಣಾ ಸರಹದ್ದಿನ ಜ್ಯುವೆಲೆರಿ ಅಂಗಡಿಯೊಂದರಲ್ಲಿ ಚೆನ್ನೈ ಬ್ರಾಂಚ್ನ ಬ್ಯೂರೊ ಆಫ್ ಸ್ಟ್ಯಾಂಡರ್ಡ್ ಅಧಿಕಾರಿಗಳೆಂದು ಹೇಳಿಕೊಂಡು, ಜ್ಯುವೆಲೆರಿ ಅಂಗಡಿಯಲ್ಲಿ ಹಾಲ್ಮಾರ್ಕ್ ಪರಿಶೀಲನೆಗೆಂದು ಬಂದು, ಚಿನ್ನಾಭರಣಗಳನ್ನು ದೋಚಿದ್ದ ಕುಖ್ಯಾತ ಅಂತರರಾಜ್ಯದ 04 ಜನ ದರೋಡೆಕೋರರನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಅವರುಗಳಿಂದ 1 ಕೆ.ಜಿ 248 ಗ್ರಾಂ ತೂಕದ ₹85 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಜ್ಯುವೆಲೆರಿ ಅಂಗಡಿಯ ಡಿ.ವಿ.ಆರ್ನ್ನು ಹಾಗು ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.
ಸದಾಶಿವನಗರ ಪೊಲೀಸ್ ಠಾಣೆಯ ಪೊಲೀಸರು ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸದಾಕೆಯನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯವರು ಆಕೆಯ ವಶದಿಂದ ಸುಮಾರು ₹ 30 ಲಕ್ಷ ಬೆಲೆಬಾಳುವ 523 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…