ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಪತ್ತೆಹಚ್ಚಿ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ವೇಳೆ ತಿಳಿದುಬಂದ ಅಂಶವೇನೆಂದರೆ, ಈ ಪ್ರಕರಣಗಳಂತೆಯೆ ಭಾರತದಾದ್ಯಂತ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್ನಲ್ಲಿ ದಾಖಲಾಗಿರುತ್ತದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ, ಅದರಲ್ಲಿ 135 ಪ್ರಕರಣಗಳು ಬೆಂಗಳೂರು ನಗರದ ವ್ಯಾಪ್ತಿಗೆ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯವು 158,094,159 ರೂ. ಎಂದು ಕಂಡುಬಂದಿದೆ. ಅದರಲ್ಲಿ 62,83,080 ಹಣವನ್ನು 30 ವಿವಿಧ ಬ್ಯಾಂಕ್ ಖಾತೆಗಳಿಂದ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್ಗಳು, 2 ಲ್ಯಾಪ್ಟಾಪ್ಗಳು, 15 ಸಿಮ್ ಕಾರ್ಡ್ಗಳು, 3 ಬ್ಯಾಂಕ್ ಚೆಕ್ ಬುಕ್ಗಳು ಹಾಗೂ ಇದಕ್ಕೆ ಸಂಬಂಧಪಟ್ಟಂತಹ ಇತರೇ ದಾಖಲಾತಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದರು.
ಕೆ.ಆರ್. ಪುರ ಪೊಲೀಸ್ ಠಾಣಾ ಸರಹದ್ದಿನ ಜ್ಯುವೆಲೆರಿ ಅಂಗಡಿಯೊಂದರಲ್ಲಿ ಚೆನ್ನೈ ಬ್ರಾಂಚ್ನ ಬ್ಯೂರೊ ಆಫ್ ಸ್ಟ್ಯಾಂಡರ್ಡ್ ಅಧಿಕಾರಿಗಳೆಂದು ಹೇಳಿಕೊಂಡು, ಜ್ಯುವೆಲೆರಿ ಅಂಗಡಿಯಲ್ಲಿ ಹಾಲ್ಮಾರ್ಕ್ ಪರಿಶೀಲನೆಗೆಂದು ಬಂದು, ಚಿನ್ನಾಭರಣಗಳನ್ನು ದೋಚಿದ್ದ ಕುಖ್ಯಾತ ಅಂತರರಾಜ್ಯದ 04 ಜನ ದರೋಡೆಕೋರರನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಅವರುಗಳಿಂದ 1 ಕೆ.ಜಿ 248 ಗ್ರಾಂ ತೂಕದ ₹85 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಜ್ಯುವೆಲೆರಿ ಅಂಗಡಿಯ ಡಿ.ವಿ.ಆರ್ನ್ನು ಹಾಗು ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.
ಸದಾಶಿವನಗರ ಪೊಲೀಸ್ ಠಾಣೆಯ ಪೊಲೀಸರು ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸದಾಕೆಯನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯವರು ಆಕೆಯ ವಶದಿಂದ ಸುಮಾರು ₹ 30 ಲಕ್ಷ ಬೆಲೆಬಾಳುವ 523 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…