ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಪತ್ತೆಹಚ್ಚಿ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ವೇಳೆ ತಿಳಿದುಬಂದ ಅಂಶವೇನೆಂದರೆ, ಈ ಪ್ರಕರಣಗಳಂತೆಯೆ ಭಾರತದಾದ್ಯಂತ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್ನಲ್ಲಿ ದಾಖಲಾಗಿರುತ್ತದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ, ಅದರಲ್ಲಿ 135 ಪ್ರಕರಣಗಳು ಬೆಂಗಳೂರು ನಗರದ ವ್ಯಾಪ್ತಿಗೆ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯವು 158,094,159 ರೂ. ಎಂದು ಕಂಡುಬಂದಿದೆ. ಅದರಲ್ಲಿ 62,83,080 ಹಣವನ್ನು 30 ವಿವಿಧ ಬ್ಯಾಂಕ್ ಖಾತೆಗಳಿಂದ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್ಗಳು, 2 ಲ್ಯಾಪ್ಟಾಪ್ಗಳು, 15 ಸಿಮ್ ಕಾರ್ಡ್ಗಳು, 3 ಬ್ಯಾಂಕ್ ಚೆಕ್ ಬುಕ್ಗಳು ಹಾಗೂ ಇದಕ್ಕೆ ಸಂಬಂಧಪಟ್ಟಂತಹ ಇತರೇ ದಾಖಲಾತಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದರು.
ಕೆ.ಆರ್. ಪುರ ಪೊಲೀಸ್ ಠಾಣಾ ಸರಹದ್ದಿನ ಜ್ಯುವೆಲೆರಿ ಅಂಗಡಿಯೊಂದರಲ್ಲಿ ಚೆನ್ನೈ ಬ್ರಾಂಚ್ನ ಬ್ಯೂರೊ ಆಫ್ ಸ್ಟ್ಯಾಂಡರ್ಡ್ ಅಧಿಕಾರಿಗಳೆಂದು ಹೇಳಿಕೊಂಡು, ಜ್ಯುವೆಲೆರಿ ಅಂಗಡಿಯಲ್ಲಿ ಹಾಲ್ಮಾರ್ಕ್ ಪರಿಶೀಲನೆಗೆಂದು ಬಂದು, ಚಿನ್ನಾಭರಣಗಳನ್ನು ದೋಚಿದ್ದ ಕುಖ್ಯಾತ ಅಂತರರಾಜ್ಯದ 04 ಜನ ದರೋಡೆಕೋರರನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಅವರುಗಳಿಂದ 1 ಕೆ.ಜಿ 248 ಗ್ರಾಂ ತೂಕದ ₹85 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಜ್ಯುವೆಲೆರಿ ಅಂಗಡಿಯ ಡಿ.ವಿ.ಆರ್ನ್ನು ಹಾಗು ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.
ಸದಾಶಿವನಗರ ಪೊಲೀಸ್ ಠಾಣೆಯ ಪೊಲೀಸರು ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸದಾಕೆಯನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯವರು ಆಕೆಯ ವಶದಿಂದ ಸುಮಾರು ₹ 30 ಲಕ್ಷ ಬೆಲೆಬಾಳುವ 523 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…