ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಮೋಸ: ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದವರನ್ನ ಬಂಧನ

ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಪತ್ತೆಹಚ್ಚಿ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ವೇಳೆ ತಿಳಿದುಬಂದ ಅಂಶವೇನೆಂದರೆ, ಈ ಪ್ರಕರಣಗಳಂತೆಯೆ ಭಾರತದಾದ್ಯಂತ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್‌ನಲ್ಲಿ ದಾಖಲಾಗಿರುತ್ತದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ, ಅದರಲ್ಲಿ 135 ಪ್ರಕರಣಗಳು ಬೆಂಗಳೂರು ನಗರದ ವ್ಯಾಪ್ತಿಗೆ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.

2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯವು 158,094,159 ರೂ. ಎಂದು ಕಂಡುಬಂದಿದೆ. ಅದರಲ್ಲಿ 62,83,080 ಹಣವನ್ನು 30 ವಿವಿಧ ಬ್ಯಾಂಕ್ ಖಾತೆಗಳಿಂದ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್‌ಗಳು, 2 ಲ್ಯಾಪ್‌ಟಾಪ್‌ಗಳು, 15 ಸಿಮ್ ಕಾರ್ಡ್‌ಗಳು, 3 ಬ್ಯಾಂಕ್ ಚೆಕ್ ಬುಕ್‌ಗಳು ಹಾಗೂ ಇದಕ್ಕೆ ಸಂಬಂಧಪಟ್ಟಂತಹ ಇತರೇ ದಾಖಲಾತಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದರು.

ಕೆ.ಆರ್. ಪುರ ಪೊಲೀಸ್ ಠಾಣಾ ಸರಹದ್ದಿನ ಜ್ಯುವೆಲೆರಿ ಅಂಗಡಿಯೊಂದರಲ್ಲಿ ಚೆನ್ನೈ ಬ್ರಾಂಚ್‌ನ ಬ್ಯೂರೊ ಆಫ್ ಸ್ಟ್ಯಾಂಡರ್ಡ್ ಅಧಿಕಾರಿಗಳೆಂದು ಹೇಳಿಕೊಂಡು, ಜ್ಯುವೆಲೆರಿ ಅಂಗಡಿಯಲ್ಲಿ ಹಾಲ್‌ಮಾರ್ಕ್ ಪರಿಶೀಲನೆಗೆಂದು ಬಂದು, ಚಿನ್ನಾಭರಣಗಳನ್ನು ದೋಚಿದ್ದ ಕುಖ್ಯಾತ ಅಂತರರಾಜ್ಯದ 04 ಜನ ದರೋಡೆಕೋರರನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಅವರುಗಳಿಂದ 1 ಕೆ.ಜಿ 248 ಗ್ರಾಂ ತೂಕದ ₹85 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಜ್ಯುವೆಲೆರಿ ಅಂಗಡಿಯ ಡಿ.ವಿ.ಆರ್‌ನ್ನು ಹಾಗು ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.

ಸದಾಶಿವನಗರ  ಪೊಲೀಸ್ ಠಾಣೆಯ ಪೊಲೀಸರು ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ  ಮನೆ ಕೆಲಸದಾಕೆಯನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯವರು ಆಕೆಯ ವಶದಿಂದ ಸುಮಾರು ₹ 30 ಲಕ್ಷ ಬೆಲೆಬಾಳುವ 523 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

2 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

3 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

17 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago