ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಪತ್ತೆಹಚ್ಚಿ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ವೇಳೆ ತಿಳಿದುಬಂದ ಅಂಶವೇನೆಂದರೆ, ಈ ಪ್ರಕರಣಗಳಂತೆಯೆ ಭಾರತದಾದ್ಯಂತ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್ನಲ್ಲಿ ದಾಖಲಾಗಿರುತ್ತದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ, ಅದರಲ್ಲಿ 135 ಪ್ರಕರಣಗಳು ಬೆಂಗಳೂರು ನಗರದ ವ್ಯಾಪ್ತಿಗೆ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯವು 158,094,159 ರೂ. ಎಂದು ಕಂಡುಬಂದಿದೆ. ಅದರಲ್ಲಿ 62,83,080 ಹಣವನ್ನು 30 ವಿವಿಧ ಬ್ಯಾಂಕ್ ಖಾತೆಗಳಿಂದ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್ಗಳು, 2 ಲ್ಯಾಪ್ಟಾಪ್ಗಳು, 15 ಸಿಮ್ ಕಾರ್ಡ್ಗಳು, 3 ಬ್ಯಾಂಕ್ ಚೆಕ್ ಬುಕ್ಗಳು ಹಾಗೂ ಇದಕ್ಕೆ ಸಂಬಂಧಪಟ್ಟಂತಹ ಇತರೇ ದಾಖಲಾತಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದರು.
ಕೆ.ಆರ್. ಪುರ ಪೊಲೀಸ್ ಠಾಣಾ ಸರಹದ್ದಿನ ಜ್ಯುವೆಲೆರಿ ಅಂಗಡಿಯೊಂದರಲ್ಲಿ ಚೆನ್ನೈ ಬ್ರಾಂಚ್ನ ಬ್ಯೂರೊ ಆಫ್ ಸ್ಟ್ಯಾಂಡರ್ಡ್ ಅಧಿಕಾರಿಗಳೆಂದು ಹೇಳಿಕೊಂಡು, ಜ್ಯುವೆಲೆರಿ ಅಂಗಡಿಯಲ್ಲಿ ಹಾಲ್ಮಾರ್ಕ್ ಪರಿಶೀಲನೆಗೆಂದು ಬಂದು, ಚಿನ್ನಾಭರಣಗಳನ್ನು ದೋಚಿದ್ದ ಕುಖ್ಯಾತ ಅಂತರರಾಜ್ಯದ 04 ಜನ ದರೋಡೆಕೋರರನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಅವರುಗಳಿಂದ 1 ಕೆ.ಜಿ 248 ಗ್ರಾಂ ತೂಕದ ₹85 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಜ್ಯುವೆಲೆರಿ ಅಂಗಡಿಯ ಡಿ.ವಿ.ಆರ್ನ್ನು ಹಾಗು ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.
ಸದಾಶಿವನಗರ ಪೊಲೀಸ್ ಠಾಣೆಯ ಪೊಲೀಸರು ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಕೆಲಸದಾಕೆಯನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯವರು ಆಕೆಯ ವಶದಿಂದ ಸುಮಾರು ₹ 30 ಲಕ್ಷ ಬೆಲೆಬಾಳುವ 523 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…