ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಮೋಸ: ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದವರನ್ನ ಬಂಧನ

ಸಾರ್ವಜನಿಕರಿಗೆ ‘ವರ್ಕ್ ಫ್ರಮ್ ಹೋಮ್’ ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ ಅಂತಾರಾಜ್ಯ ಆರೋಪಿಗಳನ್ನು ಪತ್ತೆಹಚ್ಚಿ ಅಪರಾಧಿಗಳನ್ನು ಬಂಧಿಸಲಾಗಿದೆ. ಈ ವೇಳೆ ತಿಳಿದುಬಂದ ಅಂಶವೇನೆಂದರೆ, ಈ ಪ್ರಕರಣಗಳಂತೆಯೆ ಭಾರತದಾದ್ಯಂತ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್‌ನಲ್ಲಿ ದಾಖಲಾಗಿರುತ್ತದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ, ಅದರಲ್ಲಿ 135 ಪ್ರಕರಣಗಳು ಬೆಂಗಳೂರು ನಗರದ ವ್ಯಾಪ್ತಿಗೆ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.

2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯವು 158,094,159 ರೂ. ಎಂದು ಕಂಡುಬಂದಿದೆ. ಅದರಲ್ಲಿ 62,83,080 ಹಣವನ್ನು 30 ವಿವಿಧ ಬ್ಯಾಂಕ್ ಖಾತೆಗಳಿಂದ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್‌ಗಳು, 2 ಲ್ಯಾಪ್‌ಟಾಪ್‌ಗಳು, 15 ಸಿಮ್ ಕಾರ್ಡ್‌ಗಳು, 3 ಬ್ಯಾಂಕ್ ಚೆಕ್ ಬುಕ್‌ಗಳು ಹಾಗೂ ಇದಕ್ಕೆ ಸಂಬಂಧಪಟ್ಟಂತಹ ಇತರೇ ದಾಖಲಾತಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದರು.

ಕೆ.ಆರ್. ಪುರ ಪೊಲೀಸ್ ಠಾಣಾ ಸರಹದ್ದಿನ ಜ್ಯುವೆಲೆರಿ ಅಂಗಡಿಯೊಂದರಲ್ಲಿ ಚೆನ್ನೈ ಬ್ರಾಂಚ್‌ನ ಬ್ಯೂರೊ ಆಫ್ ಸ್ಟ್ಯಾಂಡರ್ಡ್ ಅಧಿಕಾರಿಗಳೆಂದು ಹೇಳಿಕೊಂಡು, ಜ್ಯುವೆಲೆರಿ ಅಂಗಡಿಯಲ್ಲಿ ಹಾಲ್‌ಮಾರ್ಕ್ ಪರಿಶೀಲನೆಗೆಂದು ಬಂದು, ಚಿನ್ನಾಭರಣಗಳನ್ನು ದೋಚಿದ್ದ ಕುಖ್ಯಾತ ಅಂತರರಾಜ್ಯದ 04 ಜನ ದರೋಡೆಕೋರರನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಅವರುಗಳಿಂದ 1 ಕೆ.ಜಿ 248 ಗ್ರಾಂ ತೂಕದ ₹85 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಜ್ಯುವೆಲೆರಿ ಅಂಗಡಿಯ ಡಿ.ವಿ.ಆರ್‌ನ್ನು ಹಾಗು ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.

ಸದಾಶಿವನಗರ  ಪೊಲೀಸ್ ಠಾಣೆಯ ಪೊಲೀಸರು ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ  ಮನೆ ಕೆಲಸದಾಕೆಯನ್ನು ಬಂಧಿಸಿದ್ದಾರೆ. ತನಿಖಾಧಿಕಾರಿಯವರು ಆಕೆಯ ವಶದಿಂದ ಸುಮಾರು ₹ 30 ಲಕ್ಷ ಬೆಲೆಬಾಳುವ 523 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿವರಿಸಿದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

7 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

7 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

15 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago