ಸಾರ್ವಜನಿಕರಿಗೆ ಸರ್ಕಾರಿ ಸೇವೆ ಶೀಘ್ರವಾಗಿ ತಲುಪಿಸಲು ಕಂದಾಯ ಇಲಾಖೆಯ ಹಲವು ಕ್ರಮ: ಕಳೆದ ಆರು ತಿಂಗಳಲ್ಲಿ 26,151 ಕಡತಗಳ ವಿಲೇವಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ಸಾರ್ವಜನಿಕರ ಕಡತಗಳ ವಿಲೇವಾರಿ ವಿಳಂಬವನ್ನು ತಪ್ಪಿಸಲು ಕಳೆದ ಆರು ತಿಂಗಳಲ್ಲಿ ಕಂದಾಯ ಇಲಾಖೆ ಹಲವು ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ (ಕಳೆದ 6 ತಿಂಗಳಲ್ಲಿ) ಸಾಧಿಸಿರುವ ಪ್ರಗತಿ ವಿವರದ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.

*ಮ್ಯುಟೇಷನ್ ವಿಲೇವಾರಿ ಪ್ರಗತಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೆ-ಸ್ಲಿಪ್‌ಗಳು, ಪೌತಿ ಖಾತೆಗಳು, ದಾನ ಪತ್ರಗಳು ವಿಭಾಗದ ಪತ್ರಗಳು ಇತ್ಯಾದಿ. ಖಾತೆಗಳನ್ನು ಮಾಡಲು 7 ದಿನ ನೋಟೀಸ್ ಅವಧಿ ಇದ್ದು, ನೋಟೀಸ್ ಅವಧಿ ಮುಗಿದ ತಕ್ಷಣ 8ನೇ ದಿನ, 9ನೇ ದಿನಗಳಲ್ಲಿ ಖಾತೆ ಬದಲಾವಣೆ ಆಗುತ್ತಿದ್ದು, ಕಳೆದ 6 ತಿಂಗಳಿನಲ್ಲಿ ಸುಮಾರು 26,151 ಕಡತಗಳನ್ನು ವಿಲೇವಾರಿ ಮಾಡಲಾಗಿರುತ್ತದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದರು.

ಕೆರೆ ಒತ್ತುವರಿ ತೆರವು ತೆರವುಗೊಳಿಸುವಲ್ಲಿ ಸಾಧಿಸಿರುವ ಪ್ರಗತಿ

ಜಿಲ್ಲೆಯಲ್ಲಿ ಪ್ರತಿ ವಾರ ಕೆರೆ ಒತ್ತುವರಿಯನ್ನು ಗುರುತಿಸುವುದು ಹಾಗೂ ತೆರವುಗೊಳಿಸುವ ಕಾರ್ಯ” ನಿರಂತರವಾಗಿ ಪ್ರಗತಿಯಲ್ಲಿ ಇದ್ದು, ಕಳೆದ 6 ತಿಂಗಳಿಂದ 520-11 ಎ/ಗುಂಟೆ ಕೆರೆ ಒತ್ತುವರಿಯನ್ನು ತೆರವುಗೊಳಿಸಲಾಗಿರುತ್ತದೆ. ಒತ್ತುವರಿ ತೆರವುಗೊಳಿಸಿದ ನಂತರ ವಿಶೇಷವಾಗಿ ವಿನ್ಯಾಸಗೊಳಿಸಿದ ಬಾನಗಲ್ಲುಗಳನ್ನು ಮೂಲೆಗಳಲ್ಲಿ ಅಳವಡಿಸಲು ಕ್ರಮವಹಿಸಲಾಗುತ್ತಿದೆ.

*ಇ-ಕಚೇರಿ ನಿರ್ವಹಣೆಯಲ್ಲಿ ಸಾಧಿಸಿದ ಪ್ರಗತಿ*

 ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕು ಕಛೇರಿಯಲ್ಲಿ ಸಂಪೂರ್ಣವಾಗಿ ಇ-ಕಚೇರಿಯಲ್ಲಿ ಕಡತಗಳನ್ನು ನಿರ್ವಹಿಸುತ್ತಿದ್ದು, ಭೌತಿಕವಾಗಿ ಕಡತಗಳನ್ನು ನಿರ್ವಹಿಸುತ್ತಿರುವುದಿಲ್ಲ. ಉಪತಹಶೀಲ್ದಾರ್ ಕಛೇರಿ ಹಾಗೂ ರಾಜಸ್ವ ನಿರೀಕ್ಷಕರ ಕಚೇರಿಯಲ್ಲಿಯೂ ಸಹ ಇ-ಕಚೇರಿ ಪ್ರಾರಂಭಿಸಿದ್ದು, ಇ-ಕಚೇರಿಯಿಂದ ಕಡತಗಳನ್ನು ನಿರ್ವಹಿಸಲಾಗುತ್ತಿರುತ್ತದೆ.

ಗ್ರಾಮ ಆಡಳಿತಾಧಿಕಾರಿಗಳ ಕಚೇರಿಯಲ್ಲಿಯೂ ಸಹ ಇ-ಕಚೇರಿಯಿಂದ ಕಡತಗಳನ್ನು ನಿರ್ವಹಿಸಲು ಸೂಚಿಸಲಾಗಿರುತ್ತದೆ. ಇ- ಕಚೇರಿ ನಿರ್ವಹಣೆಯಿಂದ ಕಡತಗಳ ಚಲನವಲನದ ಬಗ್ಗೆ ಮಾಹಿತಿ ದೊರಕುತ್ತದೆ. ಕಡತಗಳ ನಾಪತ್ತೆ ಪ್ರಕರಣಗಳು ಉದ್ಭವಿಸುವುದಿಲ್ಲ, ಕಡತಗಳ ವಿಲೇವಾರಿ ವಿಳಂಬವನ್ನು ತಪ್ಪಿಸಿದಂತಾಗಿ ಸಾರ್ವಜನಿಕರಿಗೆ ಹಲವಾರು ರೀತಿಯ ಅನುಕೂಲಗಳು ಆಗುತ್ತಿವೆ.

*ಕಂದಾಯ ನ್ಯಾಯಾಲಯದ ಪ್ರಕರಣಗಳ ಪ್ರಗತಿ ವಿವರ*

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 494 ಪ್ರಕರಣಗಳು, ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ 1669 ಪ್ರಕರಣಗಳು ಹಾಗೂ ತಹಶೀಲ್ದಾರ್ ರವರ ನ್ಯಾಯಾಲಯದಲ್ಲಿ 2094 ಪ್ರಕರಣಗಳು ಕಳೆದ 06 ತಿಂಗಳಿನಿಂದ ಒಟ್ಟು 4257 ನ್ಯಾಯಾಲಯ ಪ್ರಕರಣಗಳನ್ನು ವಿಲೇವಾರಿ ಮಾಡಿದ್ದು, ಈ ಪೈಕಿ 975 ಎರಡು ವರ್ಷದ ಮೇಲ್ಪಟ್ಟ ಪ್ರಕರಣಗಳನ್ನು ಸಹ ವಿಲೇವಾರಿ ಮಾಡಲಾಗಿದೆ.

*ಸಕಾಲ ಸೇವೆಗಳಲ್ಲಿ ಸಾಧಿಸಿರುವ ಪ್ರಗತಿ*

ಕರ್ನಾಟಕ ಸಕಾಲ ಸೇವೆಗಳ ಕಾಯ್ದೆಯಡಿ 1191 ಸೇವೆಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ 6 ತಿಂಗಳಿನಿಂದ ಒಟ್ಟು 3,35,473 ಅರ್ಜಿಗಳನ್ನು ಸ್ವೀಕರಿಸಿದ್ದು, ಅವುಗಳಲ್ಲಿ 3,31,223 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ವಿಲೇವಾರಿ ಶೇ.93.8% ರಷ್ಟು ವಿಲೇವಾರಿ ಮಾಡಲಾಗಿರುತ್ತದೆ.

ಕಳೆದ 6 ತಿಂಗಳಲ್ಲಿ 4 ಬಾರಿ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಗಳಿಸಿ ನಾಗರೀಕರಿಗೆ ಸಕಾಲದೊಳಗೆ ಸೇವೆಗಳನ್ನು ಉತ್ತಮವಾಗಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

  ಪೋಡಿ ಪ್ರಕರಣ, ಸ್ಮಶಾನ ಭೂಮಿ ಒತ್ತುವರಿ, ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸೇರಿದಂತೆ ಕಂದಾಯ ಇಲಾಖೆ ಅಧಿಸೂಚನೆ ಯಡಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಸಮಸ್ಯೆಯನ್ನು ಶೀಘ್ರ ಇತ್ಯರ್ಥಪಡಿಸಲಾಗುತ್ತಿದೆ ಎಂದರು.

ಜನತಾದರ್ಶನದಲ್ಲಿ ಬರುವಂತಹ ದೂರು ಅಹವಾಲುಗಳನ್ನು 15 ದಿನಗಳ ಒಳಗಾಗಿ ಇತ್ಯರ್ಥ ಪಡಿಸಲಾಗುತ್ತಿದೆ ಸರ್ಕಾರದ ಕಳೆದ 06 ತಿಂಗಳಲ್ಲಿ ಇನ್ನೂ ಹಲವು ಯೋಜನೆಗಳು ಅನುಷ್ಠಾನಗೊಂಡಿದ್ದು, ಸಾರ್ವಜನಿಕರಿಗೆ ತಲುಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

   ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

11 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

11 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

15 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

16 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

22 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago