ಸಾರ್ವಜನಿಕರೇ ಕಳ್ಳರಿದ್ದಾರೆ ಎಚ್ಚರ….! ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ ಠಾಣೆಗಳ ಕೂಗಳತೆ ದೂರದಲ್ಲೇ ಚೋರರ ಗ್ಯಾಂಗ್ ಫುಲ್ ಆಕ್ಟಿವ್: “ಮನೆ-ಮನೆಗೆ ಕಳ್ಳರ” ಎಂಟ್ರಿ, ಕಳ್ಳತನಕ್ಕೆ ಯತ್ನ: ಖದೀಮರ ಚಲನವಲನ ಸಿಸಿಟಿವಿಯಲ್ಲಿ ಸೆರೆ: ಬೆಚ್ಚಿಬಿದ್ದ ಜನತೆ

ರಾತ್ರಿಹೊತ್ತು ಎಲ್ಲರೂ ಟಿವಿಗೀವಿ ನೋಡಿ, ಊಟಗೀಟ ಮಾಡಿ, ಗಾಢ ನಿದ್ರೆಗೆ ಜಾರಿದ ಮೇಲೆ ನಡುರಾತ್ರಿ ಕಳ್ಳರ ಓಡಾಟ ಶುರುವಾಗುತ್ತೆ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ, ಕೈಗಳಿಗೆ ಗ್ಲೌಸ್ ಹಾಕಿಕೊಂಡು, ಕದ್ದ ವಸ್ತುಗಳನ್ನು  ತುಂಬಿಕೊಳ್ಳಲು ಬೆನ್ನಿಗೆ ಒಂದು ಬ್ಯಾಗ್ ತಗಲಾಕೊಂಡು, ಕೈಗಳಲ್ಲಿ ಲಾಂಗ್, ಮಚ್ಚು, ಕಬ್ಬಿಣದ ರಾಡ್, ಕಲ್ಲುಗಳನ್ನು ಹಿಡಿದುಕೊಂಡು ಅಲ್ಲಲ್ಲಿ ಸಿಸಿಟಿವಿ ಇದ್ರುನೂ ಕ್ಯಾರೆ ಎನ್ನದೆ ರಾಜಾರೋಷವಾಗಿ ಮನೆಗಳ ಗೇಟ್ ತೆಗೆಯೋದು, ಕಾಂಪೌಡ್ ಹತ್ತೋದು, ಕಿಟಕಿಗಳಲ್ಲಿ ಬಗ್ಗಿ ನೋಡೋದು, ಒಂದು ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದಲ್ಲಿ ನೇರವಾಗಿ ಮನೆ ಬೀಗ ಹೊಡೆದು ಒಳ ಹೋಗಿ ಕೈಗೆ ಸಿಗುವ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗೋದು. ಇಂತಹ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಂದಿನಿ ಲೇಔಟ್, ನಿಜಗಲ್ ಲೇಔಟ್, ಯೋಗಿ ನಾರಾಯಣ ಬಡಾವಣೆ ಸುತ್ತಾಮುತ್ತ ಇರುವ ಏರಿಯಾಗಳಲ್ಲಿ ಮಂಗಳವಾರ ರಾತ್ರಿ ಬೆಳಕಿಗೆ ಬಂದಿದೆ…. ಕಳ್ಳರ ಚಲನವಲನ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಖದೀಮರ ಭಯಾನಕ ದೃಶ್ಯಗಳನ್ನ ಕಂಡ ಇಲ್ಲಿನ ನಿವಾಸಿಗಳು ಭಯಭೀತರಾಗಿದ್ದಾರೆ…..

ಮಂಗಳವಾರ ಮಧ್ಯರಾತ್ರಿ ಸುಮಾರು 2:45ರ ಸಮಯದಲ್ಲಿ ಚೋರರ ಗ್ಯಾಂಗ್ ದೊಡ್ಡಬಳ್ಳಾಪುರ ನಗರದ ನಂದಿನಿ ಲೇಔಟ್, ನಿಜಗಲ್ ಲೇಔಟ್, ಯೋಗಿ ನಾರಾಯಣ ಬಡಾವಣೆ ಸುತ್ತಾಮುತ್ತ ಇರುವ ಏರಿಯಾಗಳಲ್ಲಿನ ಮನೆಗಳ ರಾಬರಿಗೆ ಇಳಿದಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು, ಜನರು, ನಾಯಿಗಳ ಭಯವಿಲ್ಲದೇ ಇದು ನಮ್ದೆ ಏರಿಯಾ, ಮನೆ ಎಂದು ಭಾಬಿಸಿ ನಿಶಬ್ಧವಾದ ರಾತ್ರಿ ವೇಳೆ ಹಾದಿಬೀದಿಗಳಲ್ಲಿ ಸ್ಮಗ್ಲಿಂಗ್ ಗ್ಯಾಂಗ್ ಓಡಾಡುತ್ತಿದ್ದಾರೆ. ಚೋರರ ಸಂಚಾರದಿಂದ ಎಲ್ಲರಲ್ಲಿ ಸಂಚಲನ ಸೃಷ್ಟಿಸಿದೆ. ಮಂಗಳವಾರ ರಾತ್ರಿ ನಡೆದಿರುವ ಘಟನೆಯಿಂದ ಇಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಮಹಿಳೆಯರು, ಮಕ್ಕಳು, ಹೆಣ್ಣು ಮಕ್ಕಳು, ವೃದ್ಧರು ಮನೆಯಿಂದ ಹೊರಬರುವುದಕ್ಕೂ ಹೆದರುತ್ತಿದ್ದಾರೆ. ಕಳ್ಳಕಾಕರಿಂದ ನಮಗೆ ರಕ್ಷಣೆ ಬೇಕೆಂದು ಪೊಲೀಸರ ಮೊರೆ ಹೋಗಿದ್ದಾರೆ.

ಮಂಗಳವಾರ ರಾತ್ರಿ ನಡೆದ ಘಟನೆಯಿಂದ ನಾವು ತುಂಬಾನೇ ಭಯಭೀತರಾಗಿದ್ದೇವೆ. ಜೀವ ಭಯದಲ್ಲಿ ರಾತ್ರಿಗಳನ್ನ ಕಳೆಯುತ್ತಿದ್ದೇವೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಇದು ನೆಪ ಮಾತ್ರಕ್ಕೆ ಇದೆ. ನಮ್ಮ ಏರಿಯಾದ ಮನೆಗಳಿಗೆ ಯಾವೊಬ್ಬ ಪೊಲೀಸ್ ಸಿಬ್ಬಂದಿ ಅಧಿಕಾರಿಗಳು ಬಂದು ನಮ್ಮ ಸಮಸ್ಯೆಗಳನ್ನು ಆಲಿಸಿಲ್ಲ. ಬೀಟ್ ಕಾನ್‌ಸ್ಟೆಬಲ್‌ಗಳು, ಇನ್‌ಸ್ಪೆಕ್ಟರ್‌ಗಳು ಮತ್ತು ಪೊಲೀಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿ, ನಿಯಮಿತವಾಗಿ ಮನೆಗಳಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳ ದತ್ತಸಂಚಯವನ್ನು ನಿರ್ವಹಿಸುತ್ತಿಲ್ಲ ಎಂದು ನಿಜಗಲ್ ನಿವಾಸಿ ಸೋಮಣ್ಣ ಆರೋಪಿಸಿದ್ದಾರೆ.

ಕಳ್ಳರ ಕಾಟದಿಂದ ನಾವು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತಿಲ್ಲ. ಪ್ರತಿದಿನ ಜೀವಭಯದಲ್ಲಿ ಜೀವನ ಸಾಗಿಸುತ್ತಿದ್ದೇವೆ. ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳ ಕೂಗಳತೆ ದೂರದಲ್ಲಿರುವ ನಮ್ಮ ಮನೆಗಳ ಬಳಿ ಕಳ್ಳರು ಓಡಾಡುತ್ತಿದ್ದಾರೆ. ನಾವು ವಾಸ ಮಾಡುತ್ತಿರುವ ಏರಿಯಾಗಳ ಖಾಲಿ ಜಾಗಗಳು ಕುಡುಕರ ತಾಣವಾಗಿವೆ. ಇಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ. ನಮಗೆ ಪೊಲೀಸರ ಸೂಕ್ತ ರಕ್ಷಣೆ ಅತ್ಯವಶ್ಯಕವಾಗಿ ಬೇಕೇಬೇಕು. ಕೂಡಲೇ ಪೊಲೀಸ್ ಬೀಟ್ ಹೆಚ್ಚಿಸಬೇಕು. ಕಳ್ಳರ ಹೆಡೆಮುರಿಕಟ್ಟಿ ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಎಚ್ಚರ ವಹಿಸಬೇಕು ಎಂದು ಯೋಗಿ ನಾರಾಯಣ ಬಡಾವಣೆ ನಿವಾಸಿ ಗೌರಮ್ಮ ಆಗ್ರಹಿಸಿದ್ದಾರೆ….

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

17 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

22 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago