ಸಾರ್ವಜನಿಕರೇ ಕಳ್ಳರಿದ್ದಾರೆ ಎಚ್ಚರ….! ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ ಠಾಣೆಗಳ ಕೂಗಳತೆ ದೂರದಲ್ಲೇ ಚೋರರ ಗ್ಯಾಂಗ್ ಫುಲ್ ಆಕ್ಟಿವ್: “ಮನೆ-ಮನೆಗೆ ಕಳ್ಳರ” ಎಂಟ್ರಿ, ಕಳ್ಳತನಕ್ಕೆ ಯತ್ನ: ಖದೀಮರ ಚಲನವಲನ ಸಿಸಿಟಿವಿಯಲ್ಲಿ ಸೆರೆ: ಬೆಚ್ಚಿಬಿದ್ದ ಜನತೆ

ರಾತ್ರಿಹೊತ್ತು ಎಲ್ಲರೂ ಟಿವಿಗೀವಿ ನೋಡಿ, ಊಟಗೀಟ ಮಾಡಿ, ಗಾಢ ನಿದ್ರೆಗೆ ಜಾರಿದ ಮೇಲೆ ನಡುರಾತ್ರಿ ಕಳ್ಳರ ಓಡಾಟ ಶುರುವಾಗುತ್ತೆ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ, ಕೈಗಳಿಗೆ ಗ್ಲೌಸ್ ಹಾಕಿಕೊಂಡು, ಕದ್ದ ವಸ್ತುಗಳನ್ನು  ತುಂಬಿಕೊಳ್ಳಲು ಬೆನ್ನಿಗೆ ಒಂದು ಬ್ಯಾಗ್ ತಗಲಾಕೊಂಡು, ಕೈಗಳಲ್ಲಿ ಲಾಂಗ್, ಮಚ್ಚು, ಕಬ್ಬಿಣದ ರಾಡ್, ಕಲ್ಲುಗಳನ್ನು ಹಿಡಿದುಕೊಂಡು ಅಲ್ಲಲ್ಲಿ ಸಿಸಿಟಿವಿ ಇದ್ರುನೂ ಕ್ಯಾರೆ ಎನ್ನದೆ ರಾಜಾರೋಷವಾಗಿ ಮನೆಗಳ ಗೇಟ್ ತೆಗೆಯೋದು, ಕಾಂಪೌಡ್ ಹತ್ತೋದು, ಕಿಟಕಿಗಳಲ್ಲಿ ಬಗ್ಗಿ ನೋಡೋದು, ಒಂದು ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದಲ್ಲಿ ನೇರವಾಗಿ ಮನೆ ಬೀಗ ಹೊಡೆದು ಒಳ ಹೋಗಿ ಕೈಗೆ ಸಿಗುವ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗೋದು. ಇಂತಹ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಂದಿನಿ ಲೇಔಟ್, ನಿಜಗಲ್ ಲೇಔಟ್, ಯೋಗಿ ನಾರಾಯಣ ಬಡಾವಣೆ ಸುತ್ತಾಮುತ್ತ ಇರುವ ಏರಿಯಾಗಳಲ್ಲಿ ಮಂಗಳವಾರ ರಾತ್ರಿ ಬೆಳಕಿಗೆ ಬಂದಿದೆ…. ಕಳ್ಳರ ಚಲನವಲನ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಖದೀಮರ ಭಯಾನಕ ದೃಶ್ಯಗಳನ್ನ ಕಂಡ ಇಲ್ಲಿನ ನಿವಾಸಿಗಳು ಭಯಭೀತರಾಗಿದ್ದಾರೆ…..

ಮಂಗಳವಾರ ಮಧ್ಯರಾತ್ರಿ ಸುಮಾರು 2:45ರ ಸಮಯದಲ್ಲಿ ಚೋರರ ಗ್ಯಾಂಗ್ ದೊಡ್ಡಬಳ್ಳಾಪುರ ನಗರದ ನಂದಿನಿ ಲೇಔಟ್, ನಿಜಗಲ್ ಲೇಔಟ್, ಯೋಗಿ ನಾರಾಯಣ ಬಡಾವಣೆ ಸುತ್ತಾಮುತ್ತ ಇರುವ ಏರಿಯಾಗಳಲ್ಲಿನ ಮನೆಗಳ ರಾಬರಿಗೆ ಇಳಿದಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು, ಜನರು, ನಾಯಿಗಳ ಭಯವಿಲ್ಲದೇ ಇದು ನಮ್ದೆ ಏರಿಯಾ, ಮನೆ ಎಂದು ಭಾಬಿಸಿ ನಿಶಬ್ಧವಾದ ರಾತ್ರಿ ವೇಳೆ ಹಾದಿಬೀದಿಗಳಲ್ಲಿ ಸ್ಮಗ್ಲಿಂಗ್ ಗ್ಯಾಂಗ್ ಓಡಾಡುತ್ತಿದ್ದಾರೆ. ಚೋರರ ಸಂಚಾರದಿಂದ ಎಲ್ಲರಲ್ಲಿ ಸಂಚಲನ ಸೃಷ್ಟಿಸಿದೆ. ಮಂಗಳವಾರ ರಾತ್ರಿ ನಡೆದಿರುವ ಘಟನೆಯಿಂದ ಇಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಮಹಿಳೆಯರು, ಮಕ್ಕಳು, ಹೆಣ್ಣು ಮಕ್ಕಳು, ವೃದ್ಧರು ಮನೆಯಿಂದ ಹೊರಬರುವುದಕ್ಕೂ ಹೆದರುತ್ತಿದ್ದಾರೆ. ಕಳ್ಳಕಾಕರಿಂದ ನಮಗೆ ರಕ್ಷಣೆ ಬೇಕೆಂದು ಪೊಲೀಸರ ಮೊರೆ ಹೋಗಿದ್ದಾರೆ.

ಮಂಗಳವಾರ ರಾತ್ರಿ ನಡೆದ ಘಟನೆಯಿಂದ ನಾವು ತುಂಬಾನೇ ಭಯಭೀತರಾಗಿದ್ದೇವೆ. ಜೀವ ಭಯದಲ್ಲಿ ರಾತ್ರಿಗಳನ್ನ ಕಳೆಯುತ್ತಿದ್ದೇವೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಇದು ನೆಪ ಮಾತ್ರಕ್ಕೆ ಇದೆ. ನಮ್ಮ ಏರಿಯಾದ ಮನೆಗಳಿಗೆ ಯಾವೊಬ್ಬ ಪೊಲೀಸ್ ಸಿಬ್ಬಂದಿ ಅಧಿಕಾರಿಗಳು ಬಂದು ನಮ್ಮ ಸಮಸ್ಯೆಗಳನ್ನು ಆಲಿಸಿಲ್ಲ. ಬೀಟ್ ಕಾನ್‌ಸ್ಟೆಬಲ್‌ಗಳು, ಇನ್‌ಸ್ಪೆಕ್ಟರ್‌ಗಳು ಮತ್ತು ಪೊಲೀಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿ, ನಿಯಮಿತವಾಗಿ ಮನೆಗಳಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳ ದತ್ತಸಂಚಯವನ್ನು ನಿರ್ವಹಿಸುತ್ತಿಲ್ಲ ಎಂದು ನಿಜಗಲ್ ನಿವಾಸಿ ಸೋಮಣ್ಣ ಆರೋಪಿಸಿದ್ದಾರೆ.

ಕಳ್ಳರ ಕಾಟದಿಂದ ನಾವು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತಿಲ್ಲ. ಪ್ರತಿದಿನ ಜೀವಭಯದಲ್ಲಿ ಜೀವನ ಸಾಗಿಸುತ್ತಿದ್ದೇವೆ. ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳ ಕೂಗಳತೆ ದೂರದಲ್ಲಿರುವ ನಮ್ಮ ಮನೆಗಳ ಬಳಿ ಕಳ್ಳರು ಓಡಾಡುತ್ತಿದ್ದಾರೆ. ನಾವು ವಾಸ ಮಾಡುತ್ತಿರುವ ಏರಿಯಾಗಳ ಖಾಲಿ ಜಾಗಗಳು ಕುಡುಕರ ತಾಣವಾಗಿವೆ. ಇಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ. ನಮಗೆ ಪೊಲೀಸರ ಸೂಕ್ತ ರಕ್ಷಣೆ ಅತ್ಯವಶ್ಯಕವಾಗಿ ಬೇಕೇಬೇಕು. ಕೂಡಲೇ ಪೊಲೀಸ್ ಬೀಟ್ ಹೆಚ್ಚಿಸಬೇಕು. ಕಳ್ಳರ ಹೆಡೆಮುರಿಕಟ್ಟಿ ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಎಚ್ಚರ ವಹಿಸಬೇಕು ಎಂದು ಯೋಗಿ ನಾರಾಯಣ ಬಡಾವಣೆ ನಿವಾಸಿ ಗೌರಮ್ಮ ಆಗ್ರಹಿಸಿದ್ದಾರೆ….

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

12 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

20 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

20 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago