ಸಾರ್ವಜನಿಕರ ಸುರಕ್ಷತೆಗಾಗಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ

ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.

ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು – ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ.

ಯುವ ಜನರನ್ನು ಸಕಾರಾತ್ಮಕ ಚಟುವಟಿಗಳತ್ತ ತೊಡಗಿಸಲು ಇದು ಸಹಕಾರಿಯಾಗಿದ್ದು, ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗಳೊಂದಿಗೆ ಸನ್ನದ್ದರಾಗಿರಲು ಇದರಿಂದ ಸಾಧ್ಯವಾಗಲಿದೆ.

ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಜನರ ದುಃಖ ದುಮ್ಮಾನವನ್ನು ಆಲಿಸಲು ಪೊಲೀಸರೇ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿದೆ. ಇದರಿಂದ ಸ್ಥಳೀಯ ಮಟ್ಟದಿಂದ ಸಮಸ್ಯೆಗಳೇನು ಎಂಬುದು ಪೊಲೀಸರಿಗೆ ಸ್ಪಷ್ಟವಾಗಿ ಅರಿವಾಗಲಿದೆ. ಅಲ್ಲದೆ ಪೊಲೀಸರ ಕುರಿತು ಜನ ಅಭಿಪ್ರಾಯ ಸಹ ಬದಲಾಗಲಿದ್ದು, ಅಪರಾಧ ಕೃತ್ಯಗಳಿಗೆ ತಡೆಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಪೊಲೀಸರಿಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಜನರ ಬಳಿಗೆ ಪೊಲೀಸ್‌ ಸೇವೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಗಮನಹರಿಸಬೇಕು. ಈ ಕಾರ್ಯಕ್ರಮ ಯಶಸ್ವಿಯಾದರೆ ಇಲಾಖೆಗೆ ದೇಶದಲ್ಲಿ ಕೀರ್ತಿ ಸಿಗಲಿದೆ ಎಂದು ಕರೆ ನೀಡಿದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

7 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

11 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

11 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

19 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago