ಸಾರ್ವಜನಿಕರ ಸುರಕ್ಷತೆಗಾಗಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ

ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.

ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು – ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ.

ಯುವ ಜನರನ್ನು ಸಕಾರಾತ್ಮಕ ಚಟುವಟಿಗಳತ್ತ ತೊಡಗಿಸಲು ಇದು ಸಹಕಾರಿಯಾಗಿದ್ದು, ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗಳೊಂದಿಗೆ ಸನ್ನದ್ದರಾಗಿರಲು ಇದರಿಂದ ಸಾಧ್ಯವಾಗಲಿದೆ.

ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಜನರ ದುಃಖ ದುಮ್ಮಾನವನ್ನು ಆಲಿಸಲು ಪೊಲೀಸರೇ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿದೆ. ಇದರಿಂದ ಸ್ಥಳೀಯ ಮಟ್ಟದಿಂದ ಸಮಸ್ಯೆಗಳೇನು ಎಂಬುದು ಪೊಲೀಸರಿಗೆ ಸ್ಪಷ್ಟವಾಗಿ ಅರಿವಾಗಲಿದೆ. ಅಲ್ಲದೆ ಪೊಲೀಸರ ಕುರಿತು ಜನ ಅಭಿಪ್ರಾಯ ಸಹ ಬದಲಾಗಲಿದ್ದು, ಅಪರಾಧ ಕೃತ್ಯಗಳಿಗೆ ತಡೆಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಪೊಲೀಸರಿಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಜನರ ಬಳಿಗೆ ಪೊಲೀಸ್‌ ಸೇವೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಗಮನಹರಿಸಬೇಕು. ಈ ಕಾರ್ಯಕ್ರಮ ಯಶಸ್ವಿಯಾದರೆ ಇಲಾಖೆಗೆ ದೇಶದಲ್ಲಿ ಕೀರ್ತಿ ಸಿಗಲಿದೆ ಎಂದು ಕರೆ ನೀಡಿದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago