ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.
ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು – ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ.
ಯುವ ಜನರನ್ನು ಸಕಾರಾತ್ಮಕ ಚಟುವಟಿಗಳತ್ತ ತೊಡಗಿಸಲು ಇದು ಸಹಕಾರಿಯಾಗಿದ್ದು, ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗಳೊಂದಿಗೆ ಸನ್ನದ್ದರಾಗಿರಲು ಇದರಿಂದ ಸಾಧ್ಯವಾಗಲಿದೆ.
ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಜನರ ದುಃಖ ದುಮ್ಮಾನವನ್ನು ಆಲಿಸಲು ಪೊಲೀಸರೇ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿದೆ. ಇದರಿಂದ ಸ್ಥಳೀಯ ಮಟ್ಟದಿಂದ ಸಮಸ್ಯೆಗಳೇನು ಎಂಬುದು ಪೊಲೀಸರಿಗೆ ಸ್ಪಷ್ಟವಾಗಿ ಅರಿವಾಗಲಿದೆ. ಅಲ್ಲದೆ ಪೊಲೀಸರ ಕುರಿತು ಜನ ಅಭಿಪ್ರಾಯ ಸಹ ಬದಲಾಗಲಿದ್ದು, ಅಪರಾಧ ಕೃತ್ಯಗಳಿಗೆ ತಡೆಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಪೊಲೀಸರಿಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಜನರ ಬಳಿಗೆ ಪೊಲೀಸ್ ಸೇವೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಗಮನಹರಿಸಬೇಕು. ಈ ಕಾರ್ಯಕ್ರಮ ಯಶಸ್ವಿಯಾದರೆ ಇಲಾಖೆಗೆ ದೇಶದಲ್ಲಿ ಕೀರ್ತಿ ಸಿಗಲಿದೆ ಎಂದು ಕರೆ ನೀಡಿದರು.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…