ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.
ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು – ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ.
ಯುವ ಜನರನ್ನು ಸಕಾರಾತ್ಮಕ ಚಟುವಟಿಗಳತ್ತ ತೊಡಗಿಸಲು ಇದು ಸಹಕಾರಿಯಾಗಿದ್ದು, ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗಳೊಂದಿಗೆ ಸನ್ನದ್ದರಾಗಿರಲು ಇದರಿಂದ ಸಾಧ್ಯವಾಗಲಿದೆ.
ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಜನರ ದುಃಖ ದುಮ್ಮಾನವನ್ನು ಆಲಿಸಲು ಪೊಲೀಸರೇ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿದೆ. ಇದರಿಂದ ಸ್ಥಳೀಯ ಮಟ್ಟದಿಂದ ಸಮಸ್ಯೆಗಳೇನು ಎಂಬುದು ಪೊಲೀಸರಿಗೆ ಸ್ಪಷ್ಟವಾಗಿ ಅರಿವಾಗಲಿದೆ. ಅಲ್ಲದೆ ಪೊಲೀಸರ ಕುರಿತು ಜನ ಅಭಿಪ್ರಾಯ ಸಹ ಬದಲಾಗಲಿದ್ದು, ಅಪರಾಧ ಕೃತ್ಯಗಳಿಗೆ ತಡೆಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಪೊಲೀಸರಿಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಜನರ ಬಳಿಗೆ ಪೊಲೀಸ್ ಸೇವೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಗಮನಹರಿಸಬೇಕು. ಈ ಕಾರ್ಯಕ್ರಮ ಯಶಸ್ವಿಯಾದರೆ ಇಲಾಖೆಗೆ ದೇಶದಲ್ಲಿ ಕೀರ್ತಿ ಸಿಗಲಿದೆ ಎಂದು ಕರೆ ನೀಡಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…