ಸಾರ್ವಜನಿಕರ ಸುರಕ್ಷತೆಗಾಗಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ

ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.

ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು – ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ.

ಯುವ ಜನರನ್ನು ಸಕಾರಾತ್ಮಕ ಚಟುವಟಿಗಳತ್ತ ತೊಡಗಿಸಲು ಇದು ಸಹಕಾರಿಯಾಗಿದ್ದು, ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗಳೊಂದಿಗೆ ಸನ್ನದ್ದರಾಗಿರಲು ಇದರಿಂದ ಸಾಧ್ಯವಾಗಲಿದೆ.

ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಜನರ ದುಃಖ ದುಮ್ಮಾನವನ್ನು ಆಲಿಸಲು ಪೊಲೀಸರೇ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿದೆ. ಇದರಿಂದ ಸ್ಥಳೀಯ ಮಟ್ಟದಿಂದ ಸಮಸ್ಯೆಗಳೇನು ಎಂಬುದು ಪೊಲೀಸರಿಗೆ ಸ್ಪಷ್ಟವಾಗಿ ಅರಿವಾಗಲಿದೆ. ಅಲ್ಲದೆ ಪೊಲೀಸರ ಕುರಿತು ಜನ ಅಭಿಪ್ರಾಯ ಸಹ ಬದಲಾಗಲಿದ್ದು, ಅಪರಾಧ ಕೃತ್ಯಗಳಿಗೆ ತಡೆಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ಪೊಲೀಸರಿಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಜನರ ಬಳಿಗೆ ಪೊಲೀಸ್‌ ಸೇವೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಗಮನಹರಿಸಬೇಕು. ಈ ಕಾರ್ಯಕ್ರಮ ಯಶಸ್ವಿಯಾದರೆ ಇಲಾಖೆಗೆ ದೇಶದಲ್ಲಿ ಕೀರ್ತಿ ಸಿಗಲಿದೆ ಎಂದು ಕರೆ ನೀಡಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

7 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

17 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

17 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago