ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.
ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು – ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ.
ಯುವ ಜನರನ್ನು ಸಕಾರಾತ್ಮಕ ಚಟುವಟಿಗಳತ್ತ ತೊಡಗಿಸಲು ಇದು ಸಹಕಾರಿಯಾಗಿದ್ದು, ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗಳೊಂದಿಗೆ ಸನ್ನದ್ದರಾಗಿರಲು ಇದರಿಂದ ಸಾಧ್ಯವಾಗಲಿದೆ.
ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಜನರ ದುಃಖ ದುಮ್ಮಾನವನ್ನು ಆಲಿಸಲು ಪೊಲೀಸರೇ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿದೆ. ಇದರಿಂದ ಸ್ಥಳೀಯ ಮಟ್ಟದಿಂದ ಸಮಸ್ಯೆಗಳೇನು ಎಂಬುದು ಪೊಲೀಸರಿಗೆ ಸ್ಪಷ್ಟವಾಗಿ ಅರಿವಾಗಲಿದೆ. ಅಲ್ಲದೆ ಪೊಲೀಸರ ಕುರಿತು ಜನ ಅಭಿಪ್ರಾಯ ಸಹ ಬದಲಾಗಲಿದ್ದು, ಅಪರಾಧ ಕೃತ್ಯಗಳಿಗೆ ತಡೆಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಪೊಲೀಸರಿಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಜನರ ಬಳಿಗೆ ಪೊಲೀಸ್ ಸೇವೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಗಮನಹರಿಸಬೇಕು. ಈ ಕಾರ್ಯಕ್ರಮ ಯಶಸ್ವಿಯಾದರೆ ಇಲಾಖೆಗೆ ದೇಶದಲ್ಲಿ ಕೀರ್ತಿ ಸಿಗಲಿದೆ ಎಂದು ಕರೆ ನೀಡಿದರು.
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…