ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸಲಿದೆ.
ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು. ಜನರಲ್ಲಿ ನಂಬಿಕೆ ಬೆಳೆಸುವುದು – ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ.
ಯುವ ಜನರನ್ನು ಸಕಾರಾತ್ಮಕ ಚಟುವಟಿಗಳತ್ತ ತೊಡಗಿಸಲು ಇದು ಸಹಕಾರಿಯಾಗಿದ್ದು, ಒಟ್ಟಾರೆ ಸಮಾಜದಲ್ಲಿ ಗಂಭೀರ ಸಮಸ್ಯೆ ಉದ್ಭವಿಸುವ ಮೊದಲೇ ಪರಿಹಾರೋಪಾಯಗಳೊಂದಿಗೆ ಸನ್ನದ್ದರಾಗಿರಲು ಇದರಿಂದ ಸಾಧ್ಯವಾಗಲಿದೆ.
ಜನಸ್ನೇಹಿ ಆಡಳಿತ ಅನುಷ್ಠಾನ ನಿಟ್ಟಿನಲ್ಲಿ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮವು ಯಶಸ್ವಿಯಾದರೆ ದೇಶದಲ್ಲೇ ರಾಜ್ಯದ ಪೊಲೀಸ್ ಇಲಾಖೆಗೆ ಕೀರ್ತಿ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಜನರ ದುಃಖ ದುಮ್ಮಾನವನ್ನು ಆಲಿಸಲು ಪೊಲೀಸರೇ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿದೆ. ಇದರಿಂದ ಸ್ಥಳೀಯ ಮಟ್ಟದಿಂದ ಸಮಸ್ಯೆಗಳೇನು ಎಂಬುದು ಪೊಲೀಸರಿಗೆ ಸ್ಪಷ್ಟವಾಗಿ ಅರಿವಾಗಲಿದೆ. ಅಲ್ಲದೆ ಪೊಲೀಸರ ಕುರಿತು ಜನ ಅಭಿಪ್ರಾಯ ಸಹ ಬದಲಾಗಲಿದ್ದು, ಅಪರಾಧ ಕೃತ್ಯಗಳಿಗೆ ತಡೆಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಪೊಲೀಸರಿಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಜನರ ಬಳಿಗೆ ಪೊಲೀಸ್ ಸೇವೆ ತೆಗೆದುಕೊಂಡು ಹೋಗಲಾಗುತ್ತದೆ. ಈ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಗಮನಹರಿಸಬೇಕು. ಈ ಕಾರ್ಯಕ್ರಮ ಯಶಸ್ವಿಯಾದರೆ ಇಲಾಖೆಗೆ ದೇಶದಲ್ಲಿ ಕೀರ್ತಿ ಸಿಗಲಿದೆ ಎಂದು ಕರೆ ನೀಡಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…