ಸಾರ್ವಜನಿಕರ ಸೇವೆಗೆ ಸಜ್ಜಾದ ಹೀಲಿನ್ ಹಾಸ್ಪಿಟಲ್ಸ್: ಹೀಲಿನ್ ಆಸ್ಪಿಟಲ್ಸ್ ವಿರುದ್ಧ ಅಪಪ್ರಚಾರ ಆರೋಪ: ಅಪಪ್ರಚಾರ ಮಾಡಿದ ವೈದ್ಯನ ವಿರುದ್ಧ ದೂರು

ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿರುವ ನೂತನ ಹೀಲಿನ್ ಆಸ್ಪಿಟಲ್ಸ್ ವಿರುದ್ಧ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೀಲಿನ್ ಆಸ್ಪಿಟಲ್ಸ್ ಮಾಲೀಕ ಹಾಗೂ ವೈದ್ಯ ಡಾ. ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.

ಈ ಇದ್ದ ಸೆವೆನ್ ಹಿಲ್ಸ್ ಆಸ್ಪತ್ರೆಯು ಕಾರಣಾಂತರಗಳಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಅದೇ ಕಟ್ಟಡದಲ್ಲಿ ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಪರವಾನಗಿ ಪಡೆದುಕೊಂಡು ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಅ.15ರಂದು ಈ ಆಸ್ಪತ್ರೆ ಉದ್ಘಾಟನೆಯಾಗಲಿದೆ.. ಹೀಗಿರುವಾಗ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ನಮ್ಮ ಆಸ್ಪತ್ರೆಯ ಭಾವಚಿತ್ರ ತೆಗೆದು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ.

ಸೆವೆನ್ ಹಿಲ್ಸ್ ಆಸ್ಪತ್ರೆಗೂ ಹೀಲಿನ್ ಆಸ್ಪಿಟಲ್ಸ್ ಗೂ ಯಾವುದೇ ಸಂಬಂಧವಿಲ್ಲ. ಹಾಗೂ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿಗೂ ಹೀಲಿನ್ ಆಸ್ಪಿಟಲ್ಸ್ ಗೂ ಯಾವುದೇ ಸಂಬಂಧವಿಲ್ಲ. ಸುಖಾಸುಮ್ಮನೆ ನಮ್ಮ ಆಸ್ಪಿಟಲ್ ಗೆ ಅವಮಾನ ಮಾಡಲು ಯತ್ನಗಳು ನಡೆಸಲಾಗಿದೆ.

ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಕಾನೂನಾತ್ಮಕವಾಗಿ ನೋಂದಣಿ ಮಾಡಿಕೊಳ್ಳಲಾಗಿದೆ. ಹೀಲಿನ್ ಆಸ್ಪಿಟಲ್ಸ್ ಎಂಬ ಹೆಸರು ಇಡೀ ದೇಶದಲ್ಲೇ ಇಲ್ಲ. ಆದ್ದರಿಂದ ಟ್ರೇಡ್ ಮಾರ್ಕ್ ಸಹ ಪಡೆಯಲಾಗಿದೆ. ಇದನ್ನು ಸಹಿಸದ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ನಮ್ಮ ಆಸ್ಪತ್ರೆ ವಿರುದ್ಧ ಅಪಪ್ರಚಾರ ಮಾಡುವ ದೃಷ್ಟಿಯಿಂದ ಹೀಲಿನ್ ಆಸ್ಪಿಟಲ್ಸ್ ಹೆಸರು ಬಳಸಿ, ಆಸ್ಪತ್ರೆಯ ಭಾವಚಿತ್ರ ತೆಗೆದು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ನಮಗೆ ಕಿಡಿಗೇಡಿಗಳು ಎಂಬ ಪದವನ್ನು ಬಳಸಿ ಅವಮಾನ ಮಾಡುತ್ತಿದ್ದಾರೆ. ಈತನ ವಿರುದ್ಧ ನಗರ ಪೊಲೀಸ್ ಠಾಣೆಗೆ ಲಿಖಿತವಾಗಿ ದೂರನ್ನು ಸಹ ನೀಡಲಾಗಿದೆ.

ದಯವಿಟ್ಟು ಯಾರೂ ತಪ್ಪಾಗಿ ತಿಳಿದುಕೊಳ್ಳಬೇಡಿ, ನಾವು ಯಾವುದೇ ರೀತಿಯ ಕಾನೂನು ಬಾಗಿರವಾಗಿ ಆಸ್ಪತ್ರೆ ಪ್ರಾರಂಭ ಮಾಡಲು ಮುಂದಾಗುತ್ತಿಲ್ಲ. ಕಾನೂನಾತ್ಮಕವಾಗಿ, ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ ಆಸ್ಪತ್ರೆ ಪ್ರಾರಂಭ ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ 24×7ಫಾರ್ಮಸಿ, ಆಕ್ಸಿಡೆಂಟ್ ಮತ್ತು ಟ್ರಾಮಾ, ಆರ್ಥೋಪೆಡಿಕ್ಸ್, ನ್ಯೂರೋ ಕೇಂದ್ರಗಳು ಲಭ್ಯವಿರಲಿದೆ. ಜೊತೆಗೆ ಮಾತೃತ್ವ, ಮಕ್ಕಳ ಆರೈಕೆ ಘಟಕವನ್ನು ಸಹ ಪ್ರಾರಂಭ‌ ಮಾಡಲಾಗುವು ಎಂದರು.

Ramesh Babu

Journalist

Recent Posts

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

28 minutes ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

11 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

16 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

18 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

20 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago