ಸಾರ್ವಜನಿಕರ ಸೇವೆಗೆ ಸಜ್ಜಾದ ಹೀಲಿನ್ ಹಾಸ್ಪಿಟಲ್ಸ್: ಹೀಲಿನ್ ಆಸ್ಪಿಟಲ್ಸ್ ವಿರುದ್ಧ ಅಪಪ್ರಚಾರ ಆರೋಪ: ಅಪಪ್ರಚಾರ ಮಾಡಿದ ವೈದ್ಯನ ವಿರುದ್ಧ ದೂರು

ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿರುವ ನೂತನ ಹೀಲಿನ್ ಆಸ್ಪಿಟಲ್ಸ್ ವಿರುದ್ಧ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೀಲಿನ್ ಆಸ್ಪಿಟಲ್ಸ್ ಮಾಲೀಕ ಹಾಗೂ ವೈದ್ಯ ಡಾ. ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.

ಈ ಇದ್ದ ಸೆವೆನ್ ಹಿಲ್ಸ್ ಆಸ್ಪತ್ರೆಯು ಕಾರಣಾಂತರಗಳಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಅದೇ ಕಟ್ಟಡದಲ್ಲಿ ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಪರವಾನಗಿ ಪಡೆದುಕೊಂಡು ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಅ.15ರಂದು ಈ ಆಸ್ಪತ್ರೆ ಉದ್ಘಾಟನೆಯಾಗಲಿದೆ.. ಹೀಗಿರುವಾಗ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ನಮ್ಮ ಆಸ್ಪತ್ರೆಯ ಭಾವಚಿತ್ರ ತೆಗೆದು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ.

ಸೆವೆನ್ ಹಿಲ್ಸ್ ಆಸ್ಪತ್ರೆಗೂ ಹೀಲಿನ್ ಆಸ್ಪಿಟಲ್ಸ್ ಗೂ ಯಾವುದೇ ಸಂಬಂಧವಿಲ್ಲ. ಹಾಗೂ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿಗೂ ಹೀಲಿನ್ ಆಸ್ಪಿಟಲ್ಸ್ ಗೂ ಯಾವುದೇ ಸಂಬಂಧವಿಲ್ಲ. ಸುಖಾಸುಮ್ಮನೆ ನಮ್ಮ ಆಸ್ಪಿಟಲ್ ಗೆ ಅವಮಾನ ಮಾಡಲು ಯತ್ನಗಳು ನಡೆಸಲಾಗಿದೆ.

ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಕಾನೂನಾತ್ಮಕವಾಗಿ ನೋಂದಣಿ ಮಾಡಿಕೊಳ್ಳಲಾಗಿದೆ. ಹೀಲಿನ್ ಆಸ್ಪಿಟಲ್ಸ್ ಎಂಬ ಹೆಸರು ಇಡೀ ದೇಶದಲ್ಲೇ ಇಲ್ಲ. ಆದ್ದರಿಂದ ಟ್ರೇಡ್ ಮಾರ್ಕ್ ಸಹ ಪಡೆಯಲಾಗಿದೆ. ಇದನ್ನು ಸಹಿಸದ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ನಮ್ಮ ಆಸ್ಪತ್ರೆ ವಿರುದ್ಧ ಅಪಪ್ರಚಾರ ಮಾಡುವ ದೃಷ್ಟಿಯಿಂದ ಹೀಲಿನ್ ಆಸ್ಪಿಟಲ್ಸ್ ಹೆಸರು ಬಳಸಿ, ಆಸ್ಪತ್ರೆಯ ಭಾವಚಿತ್ರ ತೆಗೆದು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ನಮಗೆ ಕಿಡಿಗೇಡಿಗಳು ಎಂಬ ಪದವನ್ನು ಬಳಸಿ ಅವಮಾನ ಮಾಡುತ್ತಿದ್ದಾರೆ. ಈತನ ವಿರುದ್ಧ ನಗರ ಪೊಲೀಸ್ ಠಾಣೆಗೆ ಲಿಖಿತವಾಗಿ ದೂರನ್ನು ಸಹ ನೀಡಲಾಗಿದೆ.

ದಯವಿಟ್ಟು ಯಾರೂ ತಪ್ಪಾಗಿ ತಿಳಿದುಕೊಳ್ಳಬೇಡಿ, ನಾವು ಯಾವುದೇ ರೀತಿಯ ಕಾನೂನು ಬಾಗಿರವಾಗಿ ಆಸ್ಪತ್ರೆ ಪ್ರಾರಂಭ ಮಾಡಲು ಮುಂದಾಗುತ್ತಿಲ್ಲ. ಕಾನೂನಾತ್ಮಕವಾಗಿ, ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ ಆಸ್ಪತ್ರೆ ಪ್ರಾರಂಭ ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ 24×7ಫಾರ್ಮಸಿ, ಆಕ್ಸಿಡೆಂಟ್ ಮತ್ತು ಟ್ರಾಮಾ, ಆರ್ಥೋಪೆಡಿಕ್ಸ್, ನ್ಯೂರೋ ಕೇಂದ್ರಗಳು ಲಭ್ಯವಿರಲಿದೆ. ಜೊತೆಗೆ ಮಾತೃತ್ವ, ಮಕ್ಕಳ ಆರೈಕೆ ಘಟಕವನ್ನು ಸಹ ಪ್ರಾರಂಭ‌ ಮಾಡಲಾಗುವು ಎಂದರು.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

12 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

16 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

16 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

18 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago