ಸಾರ್ವಜನಿಕರ ಸೇವೆಗೆ ಸಜ್ಜಾದ ಹೀಲಿನ್ ಹಾಸ್ಪಿಟಲ್ಸ್: ಹೀಲಿನ್ ಆಸ್ಪಿಟಲ್ಸ್ ವಿರುದ್ಧ ಅಪಪ್ರಚಾರ ಆರೋಪ: ಅಪಪ್ರಚಾರ ಮಾಡಿದ ವೈದ್ಯನ ವಿರುದ್ಧ ದೂರು

ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿರುವ ನೂತನ ಹೀಲಿನ್ ಆಸ್ಪಿಟಲ್ಸ್ ವಿರುದ್ಧ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೀಲಿನ್ ಆಸ್ಪಿಟಲ್ಸ್ ಮಾಲೀಕ ಹಾಗೂ ವೈದ್ಯ ಡಾ. ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.

ಈ ಇದ್ದ ಸೆವೆನ್ ಹಿಲ್ಸ್ ಆಸ್ಪತ್ರೆಯು ಕಾರಣಾಂತರಗಳಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಅದೇ ಕಟ್ಟಡದಲ್ಲಿ ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಪರವಾನಗಿ ಪಡೆದುಕೊಂಡು ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಅ.15ರಂದು ಈ ಆಸ್ಪತ್ರೆ ಉದ್ಘಾಟನೆಯಾಗಲಿದೆ.. ಹೀಗಿರುವಾಗ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ನಮ್ಮ ಆಸ್ಪತ್ರೆಯ ಭಾವಚಿತ್ರ ತೆಗೆದು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ.

ಸೆವೆನ್ ಹಿಲ್ಸ್ ಆಸ್ಪತ್ರೆಗೂ ಹೀಲಿನ್ ಆಸ್ಪಿಟಲ್ಸ್ ಗೂ ಯಾವುದೇ ಸಂಬಂಧವಿಲ್ಲ. ಹಾಗೂ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿಗೂ ಹೀಲಿನ್ ಆಸ್ಪಿಟಲ್ಸ್ ಗೂ ಯಾವುದೇ ಸಂಬಂಧವಿಲ್ಲ. ಸುಖಾಸುಮ್ಮನೆ ನಮ್ಮ ಆಸ್ಪಿಟಲ್ ಗೆ ಅವಮಾನ ಮಾಡಲು ಯತ್ನಗಳು ನಡೆಸಲಾಗಿದೆ.

ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಕಾನೂನಾತ್ಮಕವಾಗಿ ನೋಂದಣಿ ಮಾಡಿಕೊಳ್ಳಲಾಗಿದೆ. ಹೀಲಿನ್ ಆಸ್ಪಿಟಲ್ಸ್ ಎಂಬ ಹೆಸರು ಇಡೀ ದೇಶದಲ್ಲೇ ಇಲ್ಲ. ಆದ್ದರಿಂದ ಟ್ರೇಡ್ ಮಾರ್ಕ್ ಸಹ ಪಡೆಯಲಾಗಿದೆ. ಇದನ್ನು ಸಹಿಸದ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ನಮ್ಮ ಆಸ್ಪತ್ರೆ ವಿರುದ್ಧ ಅಪಪ್ರಚಾರ ಮಾಡುವ ದೃಷ್ಟಿಯಿಂದ ಹೀಲಿನ್ ಆಸ್ಪಿಟಲ್ಸ್ ಹೆಸರು ಬಳಸಿ, ಆಸ್ಪತ್ರೆಯ ಭಾವಚಿತ್ರ ತೆಗೆದು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ನಮಗೆ ಕಿಡಿಗೇಡಿಗಳು ಎಂಬ ಪದವನ್ನು ಬಳಸಿ ಅವಮಾನ ಮಾಡುತ್ತಿದ್ದಾರೆ. ಈತನ ವಿರುದ್ಧ ನಗರ ಪೊಲೀಸ್ ಠಾಣೆಗೆ ಲಿಖಿತವಾಗಿ ದೂರನ್ನು ಸಹ ನೀಡಲಾಗಿದೆ.

ದಯವಿಟ್ಟು ಯಾರೂ ತಪ್ಪಾಗಿ ತಿಳಿದುಕೊಳ್ಳಬೇಡಿ, ನಾವು ಯಾವುದೇ ರೀತಿಯ ಕಾನೂನು ಬಾಗಿರವಾಗಿ ಆಸ್ಪತ್ರೆ ಪ್ರಾರಂಭ ಮಾಡಲು ಮುಂದಾಗುತ್ತಿಲ್ಲ. ಕಾನೂನಾತ್ಮಕವಾಗಿ, ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ ಆಸ್ಪತ್ರೆ ಪ್ರಾರಂಭ ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ 24×7ಫಾರ್ಮಸಿ, ಆಕ್ಸಿಡೆಂಟ್ ಮತ್ತು ಟ್ರಾಮಾ, ಆರ್ಥೋಪೆಡಿಕ್ಸ್, ನ್ಯೂರೋ ಕೇಂದ್ರಗಳು ಲಭ್ಯವಿರಲಿದೆ. ಜೊತೆಗೆ ಮಾತೃತ್ವ, ಮಕ್ಕಳ ಆರೈಕೆ ಘಟಕವನ್ನು ಸಹ ಪ್ರಾರಂಭ‌ ಮಾಡಲಾಗುವು ಎಂದರು.

Ramesh Babu

Journalist

Recent Posts

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

16 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

22 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

5 days ago