ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿರುವ ನೂತನ ಹೀಲಿನ್ ಆಸ್ಪಿಟಲ್ಸ್ ವಿರುದ್ಧ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೀಲಿನ್ ಆಸ್ಪಿಟಲ್ಸ್ ಮಾಲೀಕ ಹಾಗೂ ವೈದ್ಯ ಡಾ. ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.
ಈ ಇದ್ದ ಸೆವೆನ್ ಹಿಲ್ಸ್ ಆಸ್ಪತ್ರೆಯು ಕಾರಣಾಂತರಗಳಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಅದೇ ಕಟ್ಟಡದಲ್ಲಿ ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಪರವಾನಗಿ ಪಡೆದುಕೊಂಡು ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಅ.15ರಂದು ಈ ಆಸ್ಪತ್ರೆ ಉದ್ಘಾಟನೆಯಾಗಲಿದೆ.. ಹೀಗಿರುವಾಗ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ನಮ್ಮ ಆಸ್ಪತ್ರೆಯ ಭಾವಚಿತ್ರ ತೆಗೆದು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ.
ಸೆವೆನ್ ಹಿಲ್ಸ್ ಆಸ್ಪತ್ರೆಗೂ ಹೀಲಿನ್ ಆಸ್ಪಿಟಲ್ಸ್ ಗೂ ಯಾವುದೇ ಸಂಬಂಧವಿಲ್ಲ. ಹಾಗೂ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿಗೂ ಹೀಲಿನ್ ಆಸ್ಪಿಟಲ್ಸ್ ಗೂ ಯಾವುದೇ ಸಂಬಂಧವಿಲ್ಲ. ಸುಖಾಸುಮ್ಮನೆ ನಮ್ಮ ಆಸ್ಪಿಟಲ್ ಗೆ ಅವಮಾನ ಮಾಡಲು ಯತ್ನಗಳು ನಡೆಸಲಾಗಿದೆ.
ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಕಾನೂನಾತ್ಮಕವಾಗಿ ನೋಂದಣಿ ಮಾಡಿಕೊಳ್ಳಲಾಗಿದೆ. ಹೀಲಿನ್ ಆಸ್ಪಿಟಲ್ಸ್ ಎಂಬ ಹೆಸರು ಇಡೀ ದೇಶದಲ್ಲೇ ಇಲ್ಲ. ಆದ್ದರಿಂದ ಟ್ರೇಡ್ ಮಾರ್ಕ್ ಸಹ ಪಡೆಯಲಾಗಿದೆ. ಇದನ್ನು ಸಹಿಸದ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ನಮ್ಮ ಆಸ್ಪತ್ರೆ ವಿರುದ್ಧ ಅಪಪ್ರಚಾರ ಮಾಡುವ ದೃಷ್ಟಿಯಿಂದ ಹೀಲಿನ್ ಆಸ್ಪಿಟಲ್ಸ್ ಹೆಸರು ಬಳಸಿ, ಆಸ್ಪತ್ರೆಯ ಭಾವಚಿತ್ರ ತೆಗೆದು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ನಮಗೆ ಕಿಡಿಗೇಡಿಗಳು ಎಂಬ ಪದವನ್ನು ಬಳಸಿ ಅವಮಾನ ಮಾಡುತ್ತಿದ್ದಾರೆ. ಈತನ ವಿರುದ್ಧ ನಗರ ಪೊಲೀಸ್ ಠಾಣೆಗೆ ಲಿಖಿತವಾಗಿ ದೂರನ್ನು ಸಹ ನೀಡಲಾಗಿದೆ.
ದಯವಿಟ್ಟು ಯಾರೂ ತಪ್ಪಾಗಿ ತಿಳಿದುಕೊಳ್ಳಬೇಡಿ, ನಾವು ಯಾವುದೇ ರೀತಿಯ ಕಾನೂನು ಬಾಗಿರವಾಗಿ ಆಸ್ಪತ್ರೆ ಪ್ರಾರಂಭ ಮಾಡಲು ಮುಂದಾಗುತ್ತಿಲ್ಲ. ಕಾನೂನಾತ್ಮಕವಾಗಿ, ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ ಆಸ್ಪತ್ರೆ ಪ್ರಾರಂಭ ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ 24×7ಫಾರ್ಮಸಿ, ಆಕ್ಸಿಡೆಂಟ್ ಮತ್ತು ಟ್ರಾಮಾ, ಆರ್ಥೋಪೆಡಿಕ್ಸ್, ನ್ಯೂರೋ ಕೇಂದ್ರಗಳು ಲಭ್ಯವಿರಲಿದೆ. ಜೊತೆಗೆ ಮಾತೃತ್ವ, ಮಕ್ಕಳ ಆರೈಕೆ ಘಟಕವನ್ನು ಸಹ ಪ್ರಾರಂಭ ಮಾಡಲಾಗುವು ಎಂದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…