ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ “ಕೆ-ಜಿಐಎಸ್ 2.0 ಸ್ಥಳೀಯ ಆಡಳಿತಕ್ಕಾಗಿ ಜಿಐಎಸ್ ಆಧಾರಿತ ಮಾಹಿತಿ ತಲುಪಿಸುವ ತಾಂತ್ರಿಕ ಕಾರ್ಯಾಗಾರ” ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕ ಆಡಳಿತದಲ್ಲಿ ಕೆಲಸ ಹಾಗೂ ಸೇವೆಗಳನ್ನು ತ್ವರಿತಗತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಜಿ ಐಎಸ್ ದತ್ತಾಂಶ ಸಹಕಾರಿ ಆಗಿಲಿದೆ. ಕೆಜಿ ಐಎಸ್ ಪೋರ್ಟಲ್, ಆಪ್ ನಲ್ಲಿ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದ ದತ್ತಾಂಶ ಕ್ರೋಡೀಕರಿಸಲಾಗಿದೆ. ಸಂಬಂಧಪಟ್ಟ ಇಲಾಖೆಗಳು ತಮಗೆ ಬೇಕಾದ ಮಾಹಿತಿಯನ್ನು ಅಲ್ಲಿ ಪಡೆದುಕೊಳ್ಳಬಹುದು. ಉದಾಹರಣೆಗೆ ಶಾಲಾ ಶಿಕ್ಷಣ ಇಲಾಖೆಯ ಯಾವುದಾದರೂ ಒಂದು ಸರ್ಕಾರಿ ಶಾಲೆಯ ಮಾಹಿತಿ ಬೇಕಾದಲ್ಲಿ, ಖುದ್ದಾಗಿ ಆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡದೆ ಕೆಜಿಐಎಸ್ ಪೋರ್ಟಲ್ ಮೂಲಕ ಆ ಶಾಲೆಯ ಜಮೀನು ವಿಸ್ತೀರ್ಣ, ಪಹಣಿ ವಿವರ, ಬೌಂಡರಿ ಲೈನ್ ಸೇರಿದಂತೆ ಶಾಲೆಯ ಸಂಪೂರ್ಣ ದತ್ತಾಂಶ ಪೋರ್ಟಲ್ ನಲ್ಲಿ ಸಿಗಲಿದೆ. ಹಾಗೆ ಆಸ್ಪತ್ರೆ, ವಿದ್ಯಾರ್ಥಿ ನಿಲಯ, ಸರ್ಕಾರಿ ಜಮೀನು, ಕೆರೆ ಕುಂಟೆ, ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ಹಲವು ಇಲಾಖೆಗಳ ಮಾಹಿತಿ ಒಂದೇ ಪೋರ್ಟಲ್ ನಲ್ಲಿ ಲಭ್ಯವಿರಲಿದೆ. ಅಧಿಕಾರಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ಕೆಜಿಐಎಸ್ ಪೋರ್ಟಲ್ ನಲ್ಲಿ ಸಿಗುವ ದತ್ತಾಂಶವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ. ರಾಜೇಶ್ ಎನ್.ಎಲ್ ಅವರು ಕೆ-ಜಿಐಎಸ್ ಆವೃತ್ತಿ 1.0 ಅನ್ನು 2016 ರಲ್ಲಿ ಅನುಷ್ಟಾನಗೊಳಿಸಲಾಗಿದ್ದು, ಸುಮಾರು 600 ಜಿಐಎಸ್ ಪದರಗಳು ಮತ್ತು 20 ಲಕ್ಷ ಸರ್ಕಾರಿ ಆಸ್ತಿಗಳ ಮಾಹಿತಿಯನ್ನು ಕೆ-ಜಿಐಎಸ್ ಪೋರ್ಟಲ್‌ನಲ್ಲಿ ಒಂದೇ ಸೂರಿನಲ್ಲಿ ಲಭ್ಯವಾಗುವಂತೆ ತಂತ್ರಜ್ಞಾನವನ್ನು ಕೆಎಸ್‌ಆರ್‌ಎಸ್‌ಎಸಿ ಕೇಂದ್ರವು ಅಭಿವೃದ್ಧಿಪಡಿಸಿದೆ. ಇದರಲ್ಲಿ 41 ಮೊಬೈಲ್ ಅನ್ವಯಿಕೆಗಳು ಮತ್ತು 60 ವೆಬ್ ಅನ್ವಯಿಕೆಗಳು ಲಭ್ಯವಿದ್ದು, ನಾಗರಿಕರು ಮತ್ತು ಸರ್ಕಾರ ವಿವಿಧ ಇಲಾಖೆಗಳು ಬಳಸಿಕೊಳ್ಳುತ್ತಿರುವ ಬಗ್ಗೆ ತಿಳಿಸಿದರು.

ಕೆ-ಜಿಐಎಸ್ 2.0 ಜಿಲ್ಲಾ ಮಟ್ಟದ ಕಾರ್ಯಾಗಾರದ ಮುಖ್ಯ ಉದ್ದೇಶಗಳ ಕುರಿತು ಮಾತನಾಡುತ್ತಾ, ಪ್ರತಿ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ ತನ್ನದೇ ಆದ ವೈಶಿಷ್ಟ್ಯಗಳ ಜೊತೆಗೆ ಸ್ಥಳೀಯ ಸಮಸ್ಯೆ ಹೊಂದಿದ್ದು, ಈ ಸಮಸ್ಯೆಗಳಿಗೆ ಭೂದೈಶಿಕ ದತ್ತಾಂಶದ ಮೂಲಕ ಪರಿಹಾರ ಕಂಡುಕೊಳ್ಳಲು ಹಾಗೂ ವೆಬ್ ಮತ್ತು ಮೊಬೈಲ್ ಅನ್ವಯಿಕೆಗಳನ್ನು ತಯಾರಿಸಲು ಸಹಕಾರಿಯಾಗಿದೆ.

ಯಾರ ಆಸ್ತಿ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ದಿಶಾಂಕ್ ಆ್ಯಪ್ ನಲ್ಲಿ ತಿಳಿಯಬಹುದಾಗಿದೆ. ಕೃಷಿ ಹವಾಮಾನ ವರದಿಯನ್ನು ಆ್ಯಪ್ ಮೂಲಕ 2-3 ದಿನ ಮುಂಚೆಯೇ ಪಡೆಯಬಹುದಾಗಿದೆ.

ಜಿಲ್ಲೆಯಿಂದ ಗ್ರಾಮ ಮಟ್ಟದವರೆಗೆ ತನ್ನದೇ ಆದ ವೈಶಿಷ್ಟ್ಯಗಳ ಜೊತೆಗೆ ಸ್ಥಳೀಯ ಸಮಸ್ಯೆಗಳು ಹೊಂದಿವೆ. ಇವುಗಳಿಗೆ ಭೂದೈಶಿಕ ದತ್ತಾಂಶದ ಮೂಲಕ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳು ಸಮಗ್ರವಾಗಿ ಕೆಜಿಐಎಸ್ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕರಿಗೆ ಭೂಸಾರ, ದರ್ಪಣ, ದಿಶಾಂಕ್, ಭೂಮಿ, ಲ್ಯಾಂಡ್ ರೆವಿನ್ಯೂ ಮ್ಯಾಪಿಂಗ್, ಗ್ರಾಮ ಒನ್, ನಿಯರ್ ಬೈ ಪ್ಲೇಸಸ್ ಸೇರಿದಂತೆ ಹಲವು ಆಪ್ ಸಿದ್ದಪಡಿಸಲಾಗಿದ್ದು, ಈಗಾಗಲೇ ಎಐ ಆಧಾರಿತ ವ್ಯವಸ್ಥೆ ಕೂಡ ಪೋರ್ಟಲ್ ಹಾಗೂ ತಂತ್ರಾಂಶಗಳಲ್ಲಿ ಅಳವಡಿಸಲಾಗುತ್ತಿದೆ. ಸಾರ್ವಜನಿಕರು ಕೂಡ ವೆಬ್ ತಾಣವಾದ https://kgis.ksrsac.in/kgis ಪೋರ್ಟಲ್ ಬಳಸಿ ಅವಶ್ಯಕ ಮಾಹಿತಿ ಪಡೆಯಬಹುದು ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ಪಾಂಡುರಂಗ, ಸಂಸ್ಥೆಯ ವೈಜ್ಞಾನಿಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

11 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

13 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

14 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

23 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago