Categories: ಲೇಖನ

ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ……

ಶುದ್ಧತೆಗೆ ಒಂದು ಶಕ್ತಿಯಿದೆ – ಸಾಮರ್ಥ್ಯವಿದೆ – ಮಹತ್ವವಿದೆ – ಉದ್ದೇಶವಿದೆ – ಗುರಿಯಿದೆ –

ಶುದ್ಧತೆ ಸಾಧನೆಯ ಒಂದು ಅತ್ಯುತ್ತಮ ಮಾರ್ಗವೂ ಹೌದು, ಹಾಗೆಯೇ ಶುದ್ಧತೆ ಒಂದು ಸುಂದರ ಅನುಭವ ಸಹ……

ವಾಸ್ತವ ಬದುಕಿನ ಶುದ್ಧತೆ ಮತ್ತು ಸಾರ್ವಜನಿಕ ಅಭಿಪ್ರಾಯಗಳ ಒಂದು ಅವಲೋಕನ……

ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ ಆದರೆ ಆತ ಅತ್ಯುತ್ತಮ ಕಲಾವಿದ,

ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ. ಆದರೆ ಆತ ತುಂಬಾ ಒಳ್ಳೆಯ ಪತ್ರಕರ್ತ,

ಅವರೊಬ್ಬ ನೀಚ ಮನೋಭಾವದ ವ್ಯಕ್ತಿ. ಆದರೆ ಅವರು ಬಹುದೊಡ್ಡ ಬರಹಗಾರರು,

ಇವರೊಬ್ಬರು ವೈಯಕ್ತಿಕವಾಗಿ ಸಹಿಸಲಸಾಧ್ಯ ಗುಣದವರು. ಆದರೆ ಸಮಾಜ ಸೇವೆಯಲ್ಲಿ ಹೆಸರು ಮಾಡಿದ್ದಾರೆ,

ಮತ್ತೊಬ್ಬರು ಹೆಣ್ಣು ಬಾಕ. ಆದರೆ ಆತ ಅತ್ಯುತ್ತಮ ಸಾಹಿತಿ,

ಅವನೊಬ್ಬ ಭ್ರಷ್ಟ ವ್ಯಕ್ತಿ. ಆದರೆ ಉತ್ತಮ ಕೆಲಸಗಾರ,

ಇನ್ನೊಬ್ಬ ವಿಚಿತ್ರ ಅಸಹಜ ನಡವಳಿಕೆಯ ವ್ಯಕ್ತಿ. ಆದರೆ ಪ್ರತಿಭಾವಂತ ವಿಜ್ಞಾನಿ,

ಹೀಗೆ ಅನೇಕ ಪ್ರಖ್ಯಾತರು, ಸಾಧಕರು, ಆದರ್ಶ ವ್ಯಕ್ತಿಗಳ ಬಗ್ಗೆ ಬಹಳಷ್ಟು ಜನ ಆಗಾಗ ಮಾತನಾಡಿಕೊಳ್ಳುವುದನ್ನು ಕೇಳಿದ್ದೇವೆ.

ಹಾಗಾದರೆ,
ಆ ವ್ಯಕ್ತಿಗಳ ಸಾಧನೆ, ಜನಪ್ರಿಯತೆ, ಪ್ರಶಸ್ತಿ, ಅಧಿಕಾರದ ಮುಂದೆ ಆ ವೈಯಕ್ತಿಕ ಬದುಕಿನ ಕೆಟ್ಟ ವರ್ತನೆಗಳನ್ನು ಮರೆಯಬೇಕೆ ? ಅಥವಾ ಕ್ಷಮಿಸಿಬಿಡಬೇಕೆ ? ಎಂಬ ಪ್ರಶ್ನೆ ಕೆಲವೊಮ್ಮೆ ಕಾಡುತ್ತದೆ.

ಒಬ್ಬ ವ್ಯಕ್ತಿಯ ಒಟ್ಟು ವ್ಯಕ್ತಿತ್ವವನ್ನು ಕೇವಲ ಆತನ ಸಾಧನೆ ಜನಪ್ರಿಯತೆಯ ಆಧಾರದಲ್ಲಿ ಮಾತ್ರ ಪರಿಗಣಿಸಬೇಕೆ. ಆತನ ಇತರ ದೌರ್ಬಲ್ಯಗಳನ್ನು ನಿರ್ಲಕ್ಷಿಸಬೇಕೆ. ವ್ಯಕ್ತಿತ್ವ ಎಂದರೆ ಕೇವಲ ಮಾತು ಭಾಷಣಗಳಿಗೆ ಮಾತ್ರ ಸೀಮಿತವೇ ? ಇವರನ್ನು ಆದರ್ಶ ವ್ಯಕ್ತಿಗಳಾಗಿ ಪರಿಗಣಿಸಿ ಯುವ ಜನಾಂಗಕ್ಕೆ ಪರಿಚಯಿಸುವಾಗ ವೈಯಕ್ತಿಕ ನಡವಳಿಕೆಗಳನ್ನು ಮರೆ ಮಾಚಬೇಕೆ.

ವ್ಯಕ್ತಿತ್ವ ಇಷ್ಟೊಂದು ಸರಳವೇ ?

ಒಬ್ಬ ವ್ಯಕ್ತಿಯ ವ್ಯಕ್ತಿತ್ವವೆಂದರೆ, ಅದು ಅವನ ಹುಟ್ಟು ಸಾವಿನ ನಡುವಿನ ಅವಧಿಯಲ್ಲಿ, ಅವನ ಬದುಕಿನ ಒಟ್ಟು ರೀತಿ ನೀತಿಯ ಮೊತ್ತ. ಸಾಧನೆ ಮತ್ತು ವ್ಯಕ್ತಿತ್ವ ಒಂದೇ ನಾಣ್ಯದ ಎರಡು ಮುಖಗಳು.

ಅನೇಕ ಜನರನ್ನು ಗಮನಿಸಿದ್ದೇನೆ. ಅವರುಗಳು ಜನಪ್ರಿಯನಾದ ವ್ಯಕ್ತಿ, ಆತನ ಜಾತಿಯ, ಪರಿಚಯದ, ಪ್ರದೇಶ ಮುಂತಾದ ಅಂಶಗಳನ್ನು ಗಮನಿಸಿ ಆತ ಅವರಿಗೆ ಹತ್ತಿರದವನಾಗಿದ್ದರೆ ಆತನ ಎಲ್ಲಾ ದೌರ್ಬಲ್ಯಗಳನ್ನು ಮರೆಮಾಚಿ ಆತನನ್ನು ಮಹಾನ್ ವ್ಯಕ್ತಿಯಂತೆ ಚಿತ್ರಿಸುತ್ತಾರೆ.

ಒಬ್ಬ ಧಾರ್ಮಿಕ ನಾಯಕ, ಆಧ್ಯಾತ್ಮಿಕ ಚಿಂತಕ, ಒಬ್ಬ ಸಿನಿಮಾ ನಟ, ರಾಜಕಾರಣಿ, ಸಾಹಿತಿ, ಪತ್ರಕರ್ತ, ಕ್ರೀಡಾ ಪಟು, ವಿಜ್ಞಾನಿ ಅಥವಾ ಇನ್ಯಾವುದೇ ಕ್ಷೇತ್ರದ ವ್ಯಕ್ತಿ ಸಾರ್ವಜನಿಕ ಜೀವನದಲ್ಲಿ ಉತ್ತಮ ಸಾಧನೆ ಮಾಡಿ ವೈಯಕ್ತಿಕ ಬದುಕಿನಲ್ಲಿ ಅಸಹಜ ನಡವಳಿಕೆ ರೂಪಿಸಿಕೊಂಡಿದ್ದರೆ ಆತನನ್ನು ನಾವು ಆದರ್ಶ ವ್ಯಕ್ತಿ ಎಂದು ಪರಿಗಣಿಸಲು ಕಷ್ಟವಾಗುತ್ತದೆಯಲ್ಲವೇ ? ಆತ್ಮ ಶುದ್ದವಿಲ್ಲದ, ಕೇವಲ ತನ್ನ ಶ್ರಮ, ಪ್ರತಿಭೆ, ಅದೃಷ್ಟದಿಂದ ಪ್ರಖ್ಯಾತನಾದ ಮಾತ್ರಕ್ಕೆ ಆತನನ್ನು ದೈವತ್ವಕ್ಕೆ ಏರಿಸುವ ನಮ್ಮ ಮನೋಭಾವ ಸ್ವಲ್ಪ ಬದಲಾಯಿಸಿಕೊಳ್ಳಬೇಕಿದೆ.

ವೈಯಕ್ತಿಕ ಬದುಕು ಮತ್ತು ಸಾರ್ವಜನಿಕ ಜೀವನದ ಸಮ್ಮಿಲನದಿಂದ ಮೂಡುವ ವ್ಯಕ್ತಿತ್ವವೇ ನಿಜವಾದ ಆದರ್ಶ. ಇಲ್ಲದಿದ್ದರೆ ಯುವ ಪೀಳಿಗೆಗೆ ಕೇವಲ ಬಾಹ್ಯದಲ್ಲಿ ಯಶಸ್ವಿಯಾದ ವ್ಯಕ್ತಿಗಳ ವ್ಯಕ್ತಿತ್ವವೇ ಮುಖ್ಯವಾದರೆ ಮುಂದೆ ಮಾನವೀಯ ಮೌಲ್ಯಗಳು ಬೆಲೆ ಕಳೆದುಕೊಳ್ಳುವ ಎಲ್ಲಾ ಸಾಧ್ಯತೆ ಇದೆ.

ಈ ಬಗ್ಗೆ ನಮ್ಮ ಪ್ರತಿಕ್ರಿಯೆಗಳು ಹೆಚ್ಚು ವಾಸ್ತವಿಕ ನೆಲೆಯಲ್ಲಿ ನಿಜ ವ್ಯಕ್ತಿತ್ವದ ಗುರುತಿಸುವಿಕೆಯತ್ತ ಇರಲಿ.

ಇಲ್ಲದಿದ್ದರೆ ಕಳ್ಳರು, ಮುಖವಾಡದ ಸ್ವಾಮಿಗಳು, ಸಾಹಿತಿಗಳು, ಪತ್ರಕರ್ತರು, ಪ್ರವಚನಕಾರರು, ನಟರು, ರಾಜಕಾರಣಿಗಳು ಮುಂತಾದ ನಕಲಿಗಳು ಯಾವುದೇ ವ್ಯಕ್ತಿತ್ವ ಇಲ್ಲದೇ ಕೇವಲ ಮೇಲ್ನೋಟದ ಒಣ ಬುದ್ದಿವಂತಿಕೆಯಿಂದ ಸಮಾಜದ ಮೇಲೆ ನಿಯಂತ್ರಣ ಪಡೆದು, ನಿಜ ವ್ಯಕ್ತಿತ್ವದವರು ಹಿನ್ನೆಲೆಗೆ ಸರಿಯಬೇಕಾಗುತ್ತದೆ. ಅದು ಯುವ ಜನಾಂಗಕ್ಕೆ ನಾವು ಮಾಡುವ ವಂಚನೆಯಾಗುತ್ತದೆ. ಎಚ್ಚರವಿರಲಿ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

4 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago