ಸಾರ್ವತ್ರಿಕ ಚುನಾವಣೆ 2023: ಜಿಲ್ಲೆಯಲ್ಲಿ ಇಬ್ಬರು ಸಾಮಾನ್ಯ ವೀಕ್ಷಕರು, ಒಬ್ಬರು ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ನಾಲ್ಕು ಜನ ವೆಚ್ಚ ವೀಕ್ಷಕರ ನೇಮಕ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಭಾರತ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇಬ್ಬರು ಐ.ಎ.ಎಸ್. ಅಧಿಕಾರಿಗಳನ್ನು ಸಾಮಾನ್ಯ ವೀಕ್ಷಕರನ್ನಾಗಿ, ಒಬ್ಬರು ಐ.ಪಿ.ಎಸ್. ಅಧಿಕಾರಿಯನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ಹಾಗೂ ನಾಲ್ಕು ಜನ ಐ.ಆರ್.ಎಸ್. ಅಧಿಕಾರಿಗಳನ್ನು ವೆಚ್ಚ ವೀಕ್ಷಕರನ್ನಾಗಿ ನೇಮಕ ಮಾಡಿ ನಿಯೋಜಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಸಾಮಾನ್ಯ ವೀಕ್ಷಕರು, ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಗೆ ಹಂಚಿಕೆ ಮಾಡಿದ ವಿಧಾನಸಭಾ ಕ್ಷೇತ್ರ ಹಾಗೂ ಮೊಬೈಲ್ ಸಂಖ್ಯೆ ವಿವರ ಇಂತಿದೆ.

ಸಾಮಾನ್ಯ ವೀಕ್ಷಕರ ವಿವರ:

178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಿ.ರೊನಾಲ್ಡ್ ರೋಸ್(ಮೊ.ಸಂ.: 6363716513)

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಶಿಲ್ಪ ಗುಪ್ತ (ಮೊ.ಸಂ.: 8618630558) ಸಾಮಾನ್ಯ ವೀಕ್ಷಕರಾಗಿ ನೇಮಿಸಲಾಗಿದೆ.

ಭದ್ರತಾ(ಪೊಲೀಸ್) ವೀಕ್ಷಕರ ವಿವರ:

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಐ.ಪಿ.ಎಸ್. ಅಧಿಕಾರಿ ರೋಮಿಲ್ ಬಾನಿಯಾ ಅವರನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ನೇಮಿಸಿದೆ.

ವೆಚ್ಚ ವೀಕ್ಷಕರ ವಿವರ:

178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚಂದನ್ ದುತ್ತ(ಮೊ.ಸಂ.: 8088979205),

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಾ.ದಿನೇಶ್‌ಕುಮಾರ್ ಬಿಸೆನ್(ಮೊ.ಸಂ.: 8618854749),

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಅತುಲ್ ಪಾಂಡೆ(ಮೊ.ಸಂ.: 9019456827)

181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ರಾಮಚಂದ್ರನ್.ಜಿ(ಮೊ.ಸಂ.: 8088962561) ಅವರನ್ನು ಚುನಾವಣಾ ವೆಚ್ಚ ವೀಕ್ಷರನ್ನಾಗಿ ನೇಮಿಸಲಾಗಿದೆ.

ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅಕ್ರಮವಾಗಿ ಹಣ ಸಾಗಾಟ ಮಾಡುವುದು, ಹಂಚುವುದು, ಅಕ್ರಮ ಮದ್ಯ, ಚಿನ್ನ, ಹಣ, ಇನ್ನಿತರ ವಸ್ತುಗಳ ಸಾಗಾಟ, ಹಣ ಹಂಚಿಕೆ ಮಾಡುವುದು, ಉಡುಗೊರೆ ನೀಡುವುದು ಕಂಡುಬಂದಲ್ಲಿ ಹಾಗೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಯಾವುದೇ ಅಹವಾಲುಗಳನ್ನು ಸಾರ್ವಜನಿಕರು ಸಂಬಂಧಪಟ್ಟ ವೆಚ್ಚ ವೀಕ್ಷಕರಿಗೆ ದೂರು ನೀಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago