ಸಾರ್ವತ್ರಿಕ ಚುನಾವಣೆ 2023: ಜಿಲ್ಲೆಯಲ್ಲಿ ಇಬ್ಬರು ಸಾಮಾನ್ಯ ವೀಕ್ಷಕರು, ಒಬ್ಬರು ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ನಾಲ್ಕು ಜನ ವೆಚ್ಚ ವೀಕ್ಷಕರ ನೇಮಕ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಭಾರತ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇಬ್ಬರು ಐ.ಎ.ಎಸ್. ಅಧಿಕಾರಿಗಳನ್ನು ಸಾಮಾನ್ಯ ವೀಕ್ಷಕರನ್ನಾಗಿ, ಒಬ್ಬರು ಐ.ಪಿ.ಎಸ್. ಅಧಿಕಾರಿಯನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ಹಾಗೂ ನಾಲ್ಕು ಜನ ಐ.ಆರ್.ಎಸ್. ಅಧಿಕಾರಿಗಳನ್ನು ವೆಚ್ಚ ವೀಕ್ಷಕರನ್ನಾಗಿ ನೇಮಕ ಮಾಡಿ ನಿಯೋಜಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಸಾಮಾನ್ಯ ವೀಕ್ಷಕರು, ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಗೆ ಹಂಚಿಕೆ ಮಾಡಿದ ವಿಧಾನಸಭಾ ಕ್ಷೇತ್ರ ಹಾಗೂ ಮೊಬೈಲ್ ಸಂಖ್ಯೆ ವಿವರ ಇಂತಿದೆ.

ಸಾಮಾನ್ಯ ವೀಕ್ಷಕರ ವಿವರ:

178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಿ.ರೊನಾಲ್ಡ್ ರೋಸ್(ಮೊ.ಸಂ.: 6363716513)

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಶಿಲ್ಪ ಗುಪ್ತ (ಮೊ.ಸಂ.: 8618630558) ಸಾಮಾನ್ಯ ವೀಕ್ಷಕರಾಗಿ ನೇಮಿಸಲಾಗಿದೆ.

ಭದ್ರತಾ(ಪೊಲೀಸ್) ವೀಕ್ಷಕರ ವಿವರ:

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಐ.ಪಿ.ಎಸ್. ಅಧಿಕಾರಿ ರೋಮಿಲ್ ಬಾನಿಯಾ ಅವರನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ನೇಮಿಸಿದೆ.

ವೆಚ್ಚ ವೀಕ್ಷಕರ ವಿವರ:

178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚಂದನ್ ದುತ್ತ(ಮೊ.ಸಂ.: 8088979205),

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಾ.ದಿನೇಶ್‌ಕುಮಾರ್ ಬಿಸೆನ್(ಮೊ.ಸಂ.: 8618854749),

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಅತುಲ್ ಪಾಂಡೆ(ಮೊ.ಸಂ.: 9019456827)

181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ರಾಮಚಂದ್ರನ್.ಜಿ(ಮೊ.ಸಂ.: 8088962561) ಅವರನ್ನು ಚುನಾವಣಾ ವೆಚ್ಚ ವೀಕ್ಷರನ್ನಾಗಿ ನೇಮಿಸಲಾಗಿದೆ.

ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅಕ್ರಮವಾಗಿ ಹಣ ಸಾಗಾಟ ಮಾಡುವುದು, ಹಂಚುವುದು, ಅಕ್ರಮ ಮದ್ಯ, ಚಿನ್ನ, ಹಣ, ಇನ್ನಿತರ ವಸ್ತುಗಳ ಸಾಗಾಟ, ಹಣ ಹಂಚಿಕೆ ಮಾಡುವುದು, ಉಡುಗೊರೆ ನೀಡುವುದು ಕಂಡುಬಂದಲ್ಲಿ ಹಾಗೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಯಾವುದೇ ಅಹವಾಲುಗಳನ್ನು ಸಾರ್ವಜನಿಕರು ಸಂಬಂಧಪಟ್ಟ ವೆಚ್ಚ ವೀಕ್ಷಕರಿಗೆ ದೂರು ನೀಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

12 minutes ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

8 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

9 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago