ಸಾರ್ವತ್ರಿಕ ಚುನಾವಣೆ 2023: ಜಿಲ್ಲೆಯಲ್ಲಿ ಇಬ್ಬರು ಸಾಮಾನ್ಯ ವೀಕ್ಷಕರು, ಒಬ್ಬರು ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ನಾಲ್ಕು ಜನ ವೆಚ್ಚ ವೀಕ್ಷಕರ ನೇಮಕ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಭಾರತ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇಬ್ಬರು ಐ.ಎ.ಎಸ್. ಅಧಿಕಾರಿಗಳನ್ನು ಸಾಮಾನ್ಯ ವೀಕ್ಷಕರನ್ನಾಗಿ, ಒಬ್ಬರು ಐ.ಪಿ.ಎಸ್. ಅಧಿಕಾರಿಯನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ಹಾಗೂ ನಾಲ್ಕು ಜನ ಐ.ಆರ್.ಎಸ್. ಅಧಿಕಾರಿಗಳನ್ನು ವೆಚ್ಚ ವೀಕ್ಷಕರನ್ನಾಗಿ ನೇಮಕ ಮಾಡಿ ನಿಯೋಜಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಸಾಮಾನ್ಯ ವೀಕ್ಷಕರು, ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಗೆ ಹಂಚಿಕೆ ಮಾಡಿದ ವಿಧಾನಸಭಾ ಕ್ಷೇತ್ರ ಹಾಗೂ ಮೊಬೈಲ್ ಸಂಖ್ಯೆ ವಿವರ ಇಂತಿದೆ.

ಸಾಮಾನ್ಯ ವೀಕ್ಷಕರ ವಿವರ:

178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಿ.ರೊನಾಲ್ಡ್ ರೋಸ್(ಮೊ.ಸಂ.: 6363716513)

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಶಿಲ್ಪ ಗುಪ್ತ (ಮೊ.ಸಂ.: 8618630558) ಸಾಮಾನ್ಯ ವೀಕ್ಷಕರಾಗಿ ನೇಮಿಸಲಾಗಿದೆ.

ಭದ್ರತಾ(ಪೊಲೀಸ್) ವೀಕ್ಷಕರ ವಿವರ:

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಐ.ಪಿ.ಎಸ್. ಅಧಿಕಾರಿ ರೋಮಿಲ್ ಬಾನಿಯಾ ಅವರನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ನೇಮಿಸಿದೆ.

ವೆಚ್ಚ ವೀಕ್ಷಕರ ವಿವರ:

178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚಂದನ್ ದುತ್ತ(ಮೊ.ಸಂ.: 8088979205),

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಾ.ದಿನೇಶ್‌ಕುಮಾರ್ ಬಿಸೆನ್(ಮೊ.ಸಂ.: 8618854749),

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಅತುಲ್ ಪಾಂಡೆ(ಮೊ.ಸಂ.: 9019456827)

181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ರಾಮಚಂದ್ರನ್.ಜಿ(ಮೊ.ಸಂ.: 8088962561) ಅವರನ್ನು ಚುನಾವಣಾ ವೆಚ್ಚ ವೀಕ್ಷರನ್ನಾಗಿ ನೇಮಿಸಲಾಗಿದೆ.

ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅಕ್ರಮವಾಗಿ ಹಣ ಸಾಗಾಟ ಮಾಡುವುದು, ಹಂಚುವುದು, ಅಕ್ರಮ ಮದ್ಯ, ಚಿನ್ನ, ಹಣ, ಇನ್ನಿತರ ವಸ್ತುಗಳ ಸಾಗಾಟ, ಹಣ ಹಂಚಿಕೆ ಮಾಡುವುದು, ಉಡುಗೊರೆ ನೀಡುವುದು ಕಂಡುಬಂದಲ್ಲಿ ಹಾಗೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಯಾವುದೇ ಅಹವಾಲುಗಳನ್ನು ಸಾರ್ವಜನಿಕರು ಸಂಬಂಧಪಟ್ಟ ವೆಚ್ಚ ವೀಕ್ಷಕರಿಗೆ ದೂರು ನೀಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago